ರಾಜ್ಯ

ಪಿಎಸ್‌ಐ ಮರುಪರೀಕ್ಷೆ ಮತ್ತೆ ಲೀಕ್?‌ ದಾಖಲಾಯಿತು ದೂರು

ಈ ಹಿಂದೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದ ಕಾರಣದಿಂದ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದೇ ತಿಂಗಳ 23ರಂದು ಪಿಎಸ್‌ಐ ಮರುಪರೀಕ್ಷೆ ನಡೆಯಬೇಕಿತ್ತು. ಆದರೆ ಇದೀಗ ಈ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಹ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಪರೀಕ್ಷೆ ಬರೆಯಬೇಕಿರುವ ಹಲವು ಅಭ್ಯರ್ಥಿಗಳಿಂದ ಕೇಳಿಬಂದಿದೆ.

ಇಂಟೆಲಿಜೆನ್ಸ್‌ ವಿಭಾಗದ ಸಬ್‌ ಇನ್ಸ್‌ಪೆಕ್ಟರ್‌ ಲಿಂಗಯ್ಯ ಮಾತನಾಡಿರುವ ಆಡಿಯೊದಲ್ಲಿ ಈ ಪ್ರಶ್ನೆ ಪತ್ರಿಕೆಗಳ ಕುರಿತು ಹೇಳಿದ್ದಾರೆ ಎನ್ನಲಾದ ಆಡಿಯೊ ಕ್ಲಿಪ್‌ ಒಂದು ವೈರಲ್‌ ಆಗಿದೆ. ಈ ಆಡಿಯೊದಲ್ಲಿ ಇಂದು ( ಜನವರಿ 20 ) ಹಾಗೂ ನಾಳೆ ( ಜನವರಿ 21 ) ನಡೆಯಲಿರುವ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ಸಿಇಟಿ ಪರೀಕ್ಷೆಯ ಪತ್ರಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಇದೇ ಆಡಿಯೊದಲ್ಲಿ ಜನವರಿ 23ರಂದು ನಡೆಯಲಿರುವ ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಗ್ಗೆ ಸಹ ಮಾತನಾಡಿದ್ದಾರೆ ಎಂದೂ ಸಹ ಆರೋಪ ಕೇಳಿಬಂದಿದೆ.

ದೂರು ನೀಡಿದ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಾಂತಕುಮಾರ್‌ ಎಂಬುವವರು ಮಾಧ್ಯಮಗಳ ಜತೆ ಮಾತನಾಡಿ 1.60 ಲಕ್ಷ ಅಭ್ಯರ್ಥಿಗಳು ಕಮರ್ಷಿಯಲ್ ಟ್ಯಾಕ್ಸ್ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಆ ಪ್ರಶ್ನೆ ಪತ್ರಿಕೆಯನ್ನೂ ನಾವೇ ಕೊಡುತ್ತೇವೆ. ಉದ್ಯೋಗವನ್ನೂ ಕೊಡಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತಗೆ, ಪಿಎಸ್‌ಐ ಪರೀಕ್ಷೆಗೂ ಸಹಾಯ ಮಾಡುತ್ತೇವೆ. ಅದರ ಪ್ರಶ್ನೆಪತ್ರಿಕೆಯನ್ನೂ ಕೊಡುತ್ತೇವೆ. ಪಿಎಸ್ ಎಕ್ಸಾಂ ಅನ್ನೂ ಬರೆಸುತ್ತೇವೆ. ಕೆಪಿಎಸ್‌ಸಿ ಬೋರ್ಡ್ ಕಚೇರಿ ಮುಂದೆ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರವೇಶವಿಲ್ಲ. ಆದರೆ, ಅವರ ಪೋಷಕರನ್ನು ಒಳಗೆ ಕರೆಸಿಕೊಂಡು ಮಾತನಾಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಆಡಿಯೋನಲ್ಲಿ ಪಿಇಸ್ಐ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪವನ್, ರಜತ್ ಎಂಬುವರ ಹೆಸರುಗಳು ಕೇಳಿಬಂದಿದೆ. ಪ್ರಶ್ನೆಪತ್ರಿಕೆ ನೀಡಲು, ಪರೀಕ್ಷೆಗೆ ಸಹಾಯ ಮಾಡಲು ಹಾಗೂ ಪೋಸ್ಟಿಂಗ್ ಕುರಿತ ಸಹಾಯ ಮಾಡಲು 80 ಲಕ್ಷ ರೂ ಬೇಡಿಕೆಯನ್ನು ಅಭ್ಯರ್ಥಿಗಳ ಮುಂದಿಟ್ಟಿದ್ದಾರೆ. ಕೆಲವು ರಾಜಕಾರಣಿಗಳ ಹೆಸರನ್ನೂ ಆಡಿಯೋ ಕ್ಲಿಪ್ ನಲ್ಲಿ ಬಳಕೆ ಮಾಡಲಾಗಿದೆ. ಹಾಗಾಗಿ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದೂ ಸಹ ಶಾಂತಕುಮಾರ್‌ ಹೇಳಿದ್ದಾರೆ.

andolana

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

43 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

55 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

1 hour ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

2 hours ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

3 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

3 hours ago