ರಾಜ್ಯ

ಪಿಎಸ್‌ಐ ಮರುಪರೀಕ್ಷೆ ಮತ್ತೆ ಲೀಕ್?‌ ದಾಖಲಾಯಿತು ದೂರು

ಈ ಹಿಂದೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದ ಕಾರಣದಿಂದ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದೇ ತಿಂಗಳ 23ರಂದು ಪಿಎಸ್‌ಐ ಮರುಪರೀಕ್ಷೆ ನಡೆಯಬೇಕಿತ್ತು. ಆದರೆ ಇದೀಗ ಈ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಹ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಪರೀಕ್ಷೆ ಬರೆಯಬೇಕಿರುವ ಹಲವು ಅಭ್ಯರ್ಥಿಗಳಿಂದ ಕೇಳಿಬಂದಿದೆ.

ಇಂಟೆಲಿಜೆನ್ಸ್‌ ವಿಭಾಗದ ಸಬ್‌ ಇನ್ಸ್‌ಪೆಕ್ಟರ್‌ ಲಿಂಗಯ್ಯ ಮಾತನಾಡಿರುವ ಆಡಿಯೊದಲ್ಲಿ ಈ ಪ್ರಶ್ನೆ ಪತ್ರಿಕೆಗಳ ಕುರಿತು ಹೇಳಿದ್ದಾರೆ ಎನ್ನಲಾದ ಆಡಿಯೊ ಕ್ಲಿಪ್‌ ಒಂದು ವೈರಲ್‌ ಆಗಿದೆ. ಈ ಆಡಿಯೊದಲ್ಲಿ ಇಂದು ( ಜನವರಿ 20 ) ಹಾಗೂ ನಾಳೆ ( ಜನವರಿ 21 ) ನಡೆಯಲಿರುವ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ಸಿಇಟಿ ಪರೀಕ್ಷೆಯ ಪತ್ರಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಇದೇ ಆಡಿಯೊದಲ್ಲಿ ಜನವರಿ 23ರಂದು ನಡೆಯಲಿರುವ ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಗ್ಗೆ ಸಹ ಮಾತನಾಡಿದ್ದಾರೆ ಎಂದೂ ಸಹ ಆರೋಪ ಕೇಳಿಬಂದಿದೆ.

ದೂರು ನೀಡಿದ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಾಂತಕುಮಾರ್‌ ಎಂಬುವವರು ಮಾಧ್ಯಮಗಳ ಜತೆ ಮಾತನಾಡಿ 1.60 ಲಕ್ಷ ಅಭ್ಯರ್ಥಿಗಳು ಕಮರ್ಷಿಯಲ್ ಟ್ಯಾಕ್ಸ್ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಆ ಪ್ರಶ್ನೆ ಪತ್ರಿಕೆಯನ್ನೂ ನಾವೇ ಕೊಡುತ್ತೇವೆ. ಉದ್ಯೋಗವನ್ನೂ ಕೊಡಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತಗೆ, ಪಿಎಸ್‌ಐ ಪರೀಕ್ಷೆಗೂ ಸಹಾಯ ಮಾಡುತ್ತೇವೆ. ಅದರ ಪ್ರಶ್ನೆಪತ್ರಿಕೆಯನ್ನೂ ಕೊಡುತ್ತೇವೆ. ಪಿಎಸ್ ಎಕ್ಸಾಂ ಅನ್ನೂ ಬರೆಸುತ್ತೇವೆ. ಕೆಪಿಎಸ್‌ಸಿ ಬೋರ್ಡ್ ಕಚೇರಿ ಮುಂದೆ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರವೇಶವಿಲ್ಲ. ಆದರೆ, ಅವರ ಪೋಷಕರನ್ನು ಒಳಗೆ ಕರೆಸಿಕೊಂಡು ಮಾತನಾಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಆಡಿಯೋನಲ್ಲಿ ಪಿಇಸ್ಐ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪವನ್, ರಜತ್ ಎಂಬುವರ ಹೆಸರುಗಳು ಕೇಳಿಬಂದಿದೆ. ಪ್ರಶ್ನೆಪತ್ರಿಕೆ ನೀಡಲು, ಪರೀಕ್ಷೆಗೆ ಸಹಾಯ ಮಾಡಲು ಹಾಗೂ ಪೋಸ್ಟಿಂಗ್ ಕುರಿತ ಸಹಾಯ ಮಾಡಲು 80 ಲಕ್ಷ ರೂ ಬೇಡಿಕೆಯನ್ನು ಅಭ್ಯರ್ಥಿಗಳ ಮುಂದಿಟ್ಟಿದ್ದಾರೆ. ಕೆಲವು ರಾಜಕಾರಣಿಗಳ ಹೆಸರನ್ನೂ ಆಡಿಯೋ ಕ್ಲಿಪ್ ನಲ್ಲಿ ಬಳಕೆ ಮಾಡಲಾಗಿದೆ. ಹಾಗಾಗಿ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದೂ ಸಹ ಶಾಂತಕುಮಾರ್‌ ಹೇಳಿದ್ದಾರೆ.

andolana

Recent Posts

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

36 mins ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

45 mins ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

1 hour ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

2 hours ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

2 hours ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

3 hours ago