ರಾಜ್ಯ

ಪಿಎಸ್‌ಐ ಮರುಪರೀಕ್ಷೆ ಮತ್ತೆ ಲೀಕ್?‌ ದಾಖಲಾಯಿತು ದೂರು

ಈ ಹಿಂದೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದ ಕಾರಣದಿಂದ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದೇ ತಿಂಗಳ 23ರಂದು ಪಿಎಸ್‌ಐ ಮರುಪರೀಕ್ಷೆ ನಡೆಯಬೇಕಿತ್ತು. ಆದರೆ ಇದೀಗ ಈ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಹ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಪರೀಕ್ಷೆ ಬರೆಯಬೇಕಿರುವ ಹಲವು ಅಭ್ಯರ್ಥಿಗಳಿಂದ ಕೇಳಿಬಂದಿದೆ.

ಇಂಟೆಲಿಜೆನ್ಸ್‌ ವಿಭಾಗದ ಸಬ್‌ ಇನ್ಸ್‌ಪೆಕ್ಟರ್‌ ಲಿಂಗಯ್ಯ ಮಾತನಾಡಿರುವ ಆಡಿಯೊದಲ್ಲಿ ಈ ಪ್ರಶ್ನೆ ಪತ್ರಿಕೆಗಳ ಕುರಿತು ಹೇಳಿದ್ದಾರೆ ಎನ್ನಲಾದ ಆಡಿಯೊ ಕ್ಲಿಪ್‌ ಒಂದು ವೈರಲ್‌ ಆಗಿದೆ. ಈ ಆಡಿಯೊದಲ್ಲಿ ಇಂದು ( ಜನವರಿ 20 ) ಹಾಗೂ ನಾಳೆ ( ಜನವರಿ 21 ) ನಡೆಯಲಿರುವ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ಸಿಇಟಿ ಪರೀಕ್ಷೆಯ ಪತ್ರಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಇದೇ ಆಡಿಯೊದಲ್ಲಿ ಜನವರಿ 23ರಂದು ನಡೆಯಲಿರುವ ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಗ್ಗೆ ಸಹ ಮಾತನಾಡಿದ್ದಾರೆ ಎಂದೂ ಸಹ ಆರೋಪ ಕೇಳಿಬಂದಿದೆ.

ದೂರು ನೀಡಿದ ಅಭ್ಯರ್ಥಿಗಳಲ್ಲಿ ಒಬ್ಬರಾದ ಶಾಂತಕುಮಾರ್‌ ಎಂಬುವವರು ಮಾಧ್ಯಮಗಳ ಜತೆ ಮಾತನಾಡಿ 1.60 ಲಕ್ಷ ಅಭ್ಯರ್ಥಿಗಳು ಕಮರ್ಷಿಯಲ್ ಟ್ಯಾಕ್ಸ್ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಆ ಪ್ರಶ್ನೆ ಪತ್ರಿಕೆಯನ್ನೂ ನಾವೇ ಕೊಡುತ್ತೇವೆ. ಉದ್ಯೋಗವನ್ನೂ ಕೊಡಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತಗೆ, ಪಿಎಸ್‌ಐ ಪರೀಕ್ಷೆಗೂ ಸಹಾಯ ಮಾಡುತ್ತೇವೆ. ಅದರ ಪ್ರಶ್ನೆಪತ್ರಿಕೆಯನ್ನೂ ಕೊಡುತ್ತೇವೆ. ಪಿಎಸ್ ಎಕ್ಸಾಂ ಅನ್ನೂ ಬರೆಸುತ್ತೇವೆ. ಕೆಪಿಎಸ್‌ಸಿ ಬೋರ್ಡ್ ಕಚೇರಿ ಮುಂದೆ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರವೇಶವಿಲ್ಲ. ಆದರೆ, ಅವರ ಪೋಷಕರನ್ನು ಒಳಗೆ ಕರೆಸಿಕೊಂಡು ಮಾತನಾಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಆಡಿಯೋನಲ್ಲಿ ಪಿಇಸ್ಐ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪವನ್, ರಜತ್ ಎಂಬುವರ ಹೆಸರುಗಳು ಕೇಳಿಬಂದಿದೆ. ಪ್ರಶ್ನೆಪತ್ರಿಕೆ ನೀಡಲು, ಪರೀಕ್ಷೆಗೆ ಸಹಾಯ ಮಾಡಲು ಹಾಗೂ ಪೋಸ್ಟಿಂಗ್ ಕುರಿತ ಸಹಾಯ ಮಾಡಲು 80 ಲಕ್ಷ ರೂ ಬೇಡಿಕೆಯನ್ನು ಅಭ್ಯರ್ಥಿಗಳ ಮುಂದಿಟ್ಟಿದ್ದಾರೆ. ಕೆಲವು ರಾಜಕಾರಣಿಗಳ ಹೆಸರನ್ನೂ ಆಡಿಯೋ ಕ್ಲಿಪ್ ನಲ್ಲಿ ಬಳಕೆ ಮಾಡಲಾಗಿದೆ. ಹಾಗಾಗಿ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದೂ ಸಹ ಶಾಂತಕುಮಾರ್‌ ಹೇಳಿದ್ದಾರೆ.

andolana

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago