ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ಕಾರಟಗಿ ತಾಲ್ಲೂಕಿನ ಸೋಮನಾಶ ಗ್ರಾಮದಲ್ಲಿರುವ ಮೃತ ಪಿಎಸ್ಐ ಪರಶುರಾಮ್ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಶುರಾಮ್ ಅವರ ಸಾವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ ಅವರ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರದ ಜೊತೆಗೆ ಪತ್ನಿಗೆ ಇಲಾಖೆಯಲ್ಲಿ ಕೆಲಸ ಕೊಡಲಾಗುವುದು.
ಇದರ ಜೊತೆಗೆ ಪರಶುರಾಮ್ ಪತ್ನಿ ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ಆರೋಪ ಸಂಬಂಧ ಆದೇಶ ಮಾಡಲಾಗಿದೆ. ಪ್ರಕರಣ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳು ಪ್ರಕರಣ ಕುರಿತು ಗಂಭೀರ ತನಿಖೆ ಕೈಗೊಂಡಿದ್ದಾರೆ. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ ಎಂದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…