ಬೆಂಗಳೂರು- ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟು 545 ಪಿಎಸ್ಐ ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.
ಏ.18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 30ರ ಬೆಳಿಗ್ಗೆ 11 ಗಂಟೆಯಿಂದ ಏ.1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು.
ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜ.23ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕೃತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…