ರಾಜ್ಯ

ಪಿಎಸ್‌ಐ ಮರುಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟು 545 ಪಿಎಸ್‍ಐ ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.

ಏ.18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 30ರ ಬೆಳಿಗ್ಗೆ 11 ಗಂಟೆಯಿಂದ ಏ.1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ‌

ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜ.23ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕೃತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

andolana

Recent Posts

ʼದೇಶದ ನಿರ್ಧಾರಗಳು ವಿದೇಶಗಳಿಂದ ಆಗುತ್ತಿರುವಂತಿದೆʼ

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…

2 hours ago

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

4 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

14 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

15 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

15 hours ago