ಬೆಂಗಳೂರು- ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟು 545 ಪಿಎಸ್ಐ ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.
ಏ.18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 30ರ ಬೆಳಿಗ್ಗೆ 11 ಗಂಟೆಯಿಂದ ಏ.1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು.
ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜ.23ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕೃತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…