ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪಿಎಸ್ಐ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ 545 ಪಿಎಸ್ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಹಾಗೂ ಸಂಬಂಧಿಕರು ಆಯ್ಕೆಯಾಗಿದ್ದರು. ಈ ಹಿನ್ನೆಲೆ ಅಶ್ವಥ್ ನಾರಾಯಣ ಪ್ರಭಾವದಿಂದ ಪ್ರಕರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂಬ ಆರೋಪವಿತ್ತು.
ಈ ಆರೋಪದ ಅನ್ವಯ ಕಾಂಗ್ರೆಸ್ ಸರ್ಕಾರ ಪಿಎಸ್ಐ ಹಗರಣದ ಮರು ತನಿಖೆಗೆ ಎಸ್ಐಟಿ ಅಧಿಕಾರಿಗಳಿಗೆ ಆದೇಶ ನೀಡಿದರು. ಹೀಗಾಗಿ ಎಸ್ಐಟಿ ಅಧಿಕಾರಿಗಳು, ಅಶ್ವಥ್ ನಾರಾಯಣ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಇನ್ನೂ ಈ ಸಂಬಂಧ ವಿಚಾರಣೆಗೆ ಹಾಜರಾದ ಅಶ್ವಥ್ ನಾರಾಯಣ ಅವರು, ನನಗೂ ಪಿಎಸ್ಐ ಅಕ್ರಮದ ಅಭ್ಯರ್ಥಿಗಳಿಗೂ ಯಾವುದೇ ಸಂಬಂಧವಿಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ನಂಟಿಲ್ಲ. ನನಗೆ ತಪ್ಪಿಸ್ಥ ಅಭ್ಯರ್ಥಿಗಳು ಪರಿಚಯವಿಲ್ಲ. ಇದೊಂದು ರಾಜಕೀಯ ಪ್ರೇರಿತ, ನಾನು ಯಾರಿಗೂ ಶಿಫಾರಸ್ಸು ಮಾಡಿಲ್ಲ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…