ರಾಜ್ಯ

ಪಿಎಸ್‌ಐ ನೇಮಕಾತಿ ಅಕ್ರಮ: ಶಾಸಕ ಅಶ್ವಥ್‌ ನಾರಾಯಣಗೆ ಎಸ್‌ಐಟಿ ಗ್ರೀಲ್

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪಿಎಸ್‌ಐ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ 545 ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಹಾಗೂ ಸಂಬಂಧಿಕರು ಆಯ್ಕೆಯಾಗಿದ್ದರು. ಈ ಹಿನ್ನೆಲೆ ಅಶ್ವಥ್‌ ನಾರಾಯಣ ಪ್ರಭಾವದಿಂದ ಪ್ರಕರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂಬ ಆರೋಪವಿತ್ತು.

ಈ ಆರೋಪದ ಅನ್ವಯ ಕಾಂಗ್ರೆಸ್‌ ಸರ್ಕಾರ ಪಿಎಸ್‌ಐ ಹಗರಣದ ಮರು ತನಿಖೆಗೆ ಎಸ್‌ಐಟಿ ಅಧಿಕಾರಿಗಳಿಗೆ ಆದೇಶ ನೀಡಿದರು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು, ಅಶ್ವಥ್‌ ನಾರಾಯಣ ಅವರಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಇನ್ನೂ ಈ ಸಂಬಂಧ ವಿಚಾರಣೆಗೆ ಹಾಜರಾದ ಅಶ್ವಥ್‌ ನಾರಾಯಣ ಅವರು, ನನಗೂ ಪಿಎಸ್‌ಐ ಅಕ್ರಮದ ಅಭ್ಯರ್ಥಿಗಳಿಗೂ ಯಾವುದೇ ಸಂಬಂಧವಿಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ನಂಟಿಲ್ಲ. ನನಗೆ ತಪ್ಪಿಸ್ಥ ಅಭ್ಯರ್ಥಿಗಳು ಪರಿಚಯವಿಲ್ಲ. ಇದೊಂದು ರಾಜಕೀಯ ಪ್ರೇರಿತ, ನಾನು ಯಾರಿಗೂ ಶಿಫಾರಸ್ಸು ಮಾಡಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

55 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago