ರಾಜ್ಯ

ಪಿಎಸ್‌ಐ ನೇಮಕಾತಿ ಅಕ್ರಮ: ಶಾಸಕ ಅಶ್ವಥ್‌ ನಾರಾಯಣಗೆ ಎಸ್‌ಐಟಿ ಗ್ರೀಲ್

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪಿಎಸ್‌ಐ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ 545 ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಹಾಗೂ ಸಂಬಂಧಿಕರು ಆಯ್ಕೆಯಾಗಿದ್ದರು. ಈ ಹಿನ್ನೆಲೆ ಅಶ್ವಥ್‌ ನಾರಾಯಣ ಪ್ರಭಾವದಿಂದ ಪ್ರಕರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂಬ ಆರೋಪವಿತ್ತು.

ಈ ಆರೋಪದ ಅನ್ವಯ ಕಾಂಗ್ರೆಸ್‌ ಸರ್ಕಾರ ಪಿಎಸ್‌ಐ ಹಗರಣದ ಮರು ತನಿಖೆಗೆ ಎಸ್‌ಐಟಿ ಅಧಿಕಾರಿಗಳಿಗೆ ಆದೇಶ ನೀಡಿದರು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು, ಅಶ್ವಥ್‌ ನಾರಾಯಣ ಅವರಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಇನ್ನೂ ಈ ಸಂಬಂಧ ವಿಚಾರಣೆಗೆ ಹಾಜರಾದ ಅಶ್ವಥ್‌ ನಾರಾಯಣ ಅವರು, ನನಗೂ ಪಿಎಸ್‌ಐ ಅಕ್ರಮದ ಅಭ್ಯರ್ಥಿಗಳಿಗೂ ಯಾವುದೇ ಸಂಬಂಧವಿಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ನಂಟಿಲ್ಲ. ನನಗೆ ತಪ್ಪಿಸ್ಥ ಅಭ್ಯರ್ಥಿಗಳು ಪರಿಚಯವಿಲ್ಲ. ಇದೊಂದು ರಾಜಕೀಯ ಪ್ರೇರಿತ, ನಾನು ಯಾರಿಗೂ ಶಿಫಾರಸ್ಸು ಮಾಡಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago