ರಾಜ್ಯ

ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜನವರಿ 23ಕ್ಕೆ ಮುಂದೂಡಿಕೆ: ಪರಮೇಶ್ವರ್

ಬೆಳಗಾವಿ : ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.

545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್‌ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು.

ಪ್ರಶ್ನೆ ಪತ್ರಿಕೆ ಸೋರಿಕೆ ಸುದ್ದಿ ಮುನ್ನಲೆಗೆ ಬರುತ್ತಿದ್ದಂತೆ ಎಚ್ಚೆತ್ತಾ ಅಂದಿನ ಬಿಜೆಪಿ ಸರ್ಕಾರ ಪರೀಕ್ಷೆಯನ್ನು ರದ್ದುಪಡಿಸಿ, ಮರು ಪರೀಕ್ಷೆ ನಡೆಸಲು ನಡೆಸಲು ನಿರ್ಧರಿಸಿತ್ತು.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಲ್ಲಿನ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್​ ತಿಳಿಸಿದ್ದಾರೆ.

2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು.

ಈ ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಪೊಲೀಸ್ ಉಪ ಅಧೀಕ್ಷಕರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಶ್ರೇಣಿಯ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

13 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

20 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

25 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

29 mins ago