ಪಾವಗಡ: ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಪಾವಗಡದ ಸೋಲಾರ್ ಪಾರ್ಕ್ಗೆ ಬುಧವಾರ ಭೇಟಿ ನೀಡಿತು.
ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕರಾದ ಟಿ.ಡಿ. ರಾಜೇಗೌಡ ಅವರನ್ನು ಒಳಗೊಂಡಂತೆ ಶಾಸಕರಾದ ಯು.ಬಿ.ಬಣಕಾರ್, ಡಿ.ಜಿ.ಶಾಂತನಗೌಡ, ಹೆಚ್.ವಿ.ವೆಂಕಟೇಶ್ ಹಾಗೂ ವಿಧಾನ ಪರಿಷತ್ ಸದ್ಯರಾದ ಉಮಾಶ್ರೀ, ಭಾರತಿ ಶೆಟ್ಟಿ ಅವರಿದ್ದ ನಿಯೋಗಕ್ಕೆ ಅಧಿಕಾರಿಗಳು ಪಾರ್ಕ್ನ ವೈಶಿಷ್ಟ್ಯತೆಗಳ ಬಗ್ಗೆ ವಿವರ ನೀಡಿದರು.
ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್, “ಇಂಧನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪಾವಗಡದ ಸೋಲಾರ್ ಪಾರ್ಕ್ ಮಾದರಿಯಾಗಿದೆ. ಇದೇ ರೀತಿ ರಾಜ್ಯದ ಬೇರೆ ಭಾಗದಲ್ಲೂ ಬೃಹತ್ ಸೋಲಾರ್ ಪಾರ್ಕ್ ಅಭಿವೃದ್ಧಿಯಾಗಬೇಕು,” ಎಂದು ಹೇಳಿದರು.
ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಕೆ.ಎಸ್.ಪಿ.ಡಿ.ಸಿ.ಎಲ್.ನ ಸಿಇಓ ಅಮರನಾಥ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…