ರಾಜ್ಯ

ನೀರಿಗಾಗಿ ಪರಿತಪಿಸುತ್ತಿರುವ ಜನ – ಜನರ ದುಡ್ಡಲ್ಲಿ ಸಿಎಂ ಜಾತ್ರೆ : ಆರ್‌.ಅಶೋಕ್‌ !

ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ‌ ಎಂದು ‌ಪ್ರತಿಪಕ್ಷದ ನಾಯಕ‌ ಆರ್.ಅಶೋಕ್ ‌ಚಾಟಿ ಬೀಸಿದ್ದಾರೆ.

ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು‌ ಸರ್ಕಾರದ ವಿರುದ್ದ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ.

ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ ಒಂದು ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಎರಡು ಕೋಟಿ ಖರ್ಚು ಮಾಡಿ ಉತ್ಸವ ಮಾಡುತ್ತಿದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.

ಗ್ಯಾರೆಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಬಹುದಿತ್ತು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೂಡಬಹುದಿತ್ತಲ್ಲವೆ, ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಪ್ರಚಾರವೇ ಹೆಚ್ಚಾಗಿ ಹೋಯಿತೇ ಎಂದು ಕಿಡಿಕಾರಿದ್ದಾರೆ

andolanait

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

4 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

4 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

4 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

9 hours ago