ರಾಜ್ಯ

ನೀರಿಗಾಗಿ ಪರಿತಪಿಸುತ್ತಿರುವ ಜನ – ಜನರ ದುಡ್ಡಲ್ಲಿ ಸಿಎಂ ಜಾತ್ರೆ : ಆರ್‌.ಅಶೋಕ್‌ !

ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ‌ ಎಂದು ‌ಪ್ರತಿಪಕ್ಷದ ನಾಯಕ‌ ಆರ್.ಅಶೋಕ್ ‌ಚಾಟಿ ಬೀಸಿದ್ದಾರೆ.

ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು‌ ಸರ್ಕಾರದ ವಿರುದ್ದ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ.

ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ ಒಂದು ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಎರಡು ಕೋಟಿ ಖರ್ಚು ಮಾಡಿ ಉತ್ಸವ ಮಾಡುತ್ತಿದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.

ಗ್ಯಾರೆಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಬಹುದಿತ್ತು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೂಡಬಹುದಿತ್ತಲ್ಲವೆ, ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಪ್ರಚಾರವೇ ಹೆಚ್ಚಾಗಿ ಹೋಯಿತೇ ಎಂದು ಕಿಡಿಕಾರಿದ್ದಾರೆ

andolanait

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

2 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

2 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

2 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

2 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

2 hours ago