ರಾಜ್ಯ

ಕೇಂದ್ರದ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ: ಡಿಕೆ ಶಿವಕುಮಾರ್‌

ಬೆಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಏ.17 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಾಂಗ್ರೆಸ್‌ ಜನಾಕ್ರೋಶ ಯಾತ್ರೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಈಗಾಗಲೇ ನಮ್ಮ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುತ್ತಿದೆ. ಇದು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಬೆಲೆ ಏರಿಕೆ ಮಾಡುತ್ತಿರುವುದು ಮೋದಿ ನೇತೃತ್ವದ ಕೇಂದ್ರ ಸರ್ಕಾರ. ಅವರ ಸರ್ಕಾರದ ವಿರುದ್ದ ಅವರೇ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ನಮ್ಮ ವಿರುದ್ದ ಯಾತ್ರೆ ಮಾಡುವಂತದು ಏನು ಇಲ್ಲ. ಕೇಂದ್ರದ ನೀತಿಗಳಿಂದ ದೇಶದ ಎಲ್ಲ ವರ್ಗದ ಜನರಿಗೆ ಸಮಸ್ಯೆಯಾಗಿದೆ. ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಅಂತ ಬೋರ್ಡ್‌ ಹಾಕಿಕೊಳ್ಳಲಿ ಎಂದು ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಾಣದ ವಿಚಾರವಾಗಿ ಮಾತನಾಡಿ, ಏರ್‌ಪೋರ್ಟ್‌ ವಿಚಾರದಲ್ಲಿ ಯಾರು ನನ್ನ ಜೊತೆ ಚರ್ಚಿಸಿಲ್ಲ. ನಾನು ನಗರದಲ್ಲಿ ಮತ್ತೊಂದು ಏರ್‌ಪೋರ್ಟ್‌ ಆಗಬೇಕು ಎಂದು ಹೇಳಿಲ್ಲ. ರಾಜ್ಯದಲ್ಲಿ ಎಲ್ಲೇ ಏರ್‌ಪೋರ್ಟ್‌ ಮಾಡಿದರೂ ನನಗೆ ಖುಷಿ ಎಂದು ತಿಳಿಸಿದರು.

 

 

ಆಂದೋಲನ ಡೆಸ್ಕ್

Recent Posts

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

1 hour ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

1 hour ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

2 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

3 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

3 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

4 hours ago