ಬೆಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಏ.17 ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಕಾಂಗ್ರೆಸ್ ಜನಾಕ್ರೋಶ ಯಾತ್ರೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಈಗಾಗಲೇ ನಮ್ಮ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುತ್ತಿದೆ. ಇದು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಬೆಲೆ ಏರಿಕೆ ಮಾಡುತ್ತಿರುವುದು ಮೋದಿ ನೇತೃತ್ವದ ಕೇಂದ್ರ ಸರ್ಕಾರ. ಅವರ ಸರ್ಕಾರದ ವಿರುದ್ದ ಅವರೇ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ನಮ್ಮ ವಿರುದ್ದ ಯಾತ್ರೆ ಮಾಡುವಂತದು ಏನು ಇಲ್ಲ. ಕೇಂದ್ರದ ನೀತಿಗಳಿಂದ ದೇಶದ ಎಲ್ಲ ವರ್ಗದ ಜನರಿಗೆ ಸಮಸ್ಯೆಯಾಗಿದೆ. ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಅಂತ ಬೋರ್ಡ್ ಹಾಕಿಕೊಳ್ಳಲಿ ಎಂದು ಲೇವಡಿ ಮಾಡಿದರು.
ಬೆಂಗಳೂರಿನಲ್ಲಿ 2ನೇ ಏರ್ಪೋರ್ಟ್ ನಿರ್ಮಾಣದ ವಿಚಾರವಾಗಿ ಮಾತನಾಡಿ, ಏರ್ಪೋರ್ಟ್ ವಿಚಾರದಲ್ಲಿ ಯಾರು ನನ್ನ ಜೊತೆ ಚರ್ಚಿಸಿಲ್ಲ. ನಾನು ನಗರದಲ್ಲಿ ಮತ್ತೊಂದು ಏರ್ಪೋರ್ಟ್ ಆಗಬೇಕು ಎಂದು ಹೇಳಿಲ್ಲ. ರಾಜ್ಯದಲ್ಲಿ ಎಲ್ಲೇ ಏರ್ಪೋರ್ಟ್ ಮಾಡಿದರೂ ನನಗೆ ಖುಷಿ ಎಂದು ತಿಳಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…