ನಂಜನಗೂಡು: ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಘಟನೆ ವಿರೋಧಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಇಂದು ಕರೆದಿದ್ದ ನಂಜನಗೂಡು ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿರುವುದ ಕಂಡುಬಂದಿದೆ.
ಬಂದ್ಗೆ ಸಂಬಂಧಿಸಿದಂತೆ ನಿನ್ನೆ ನಂಜನಗೂಡು ತಾಲೂಕು ಆಡಳಿತ ಮಂಡಳಿಯಲ್ಲಿ ಎಡಿಸಿ ನೇತೃತ್ವದಲ್ಲಿ ಶಾಂತಿ ಸಭೆಯಲ್ಲಿ ಕರೆಯಲಾಗಿದ್ದು, ಬಂದ್ಗೆ ಯಾವುದೆ ಅನುಮತಿ ನೀಡಲಾಗುವುದಿಲ್ಲ. ಯಾರು ಬಂದ್ ಮಾಡುವಹಾಗಿಲ್ಲ ಎಂದು ಖಡಕ್ ಎಚ್ಚರಿಕೆಯನ್ನು ಎಡಿಸಿ ರವಾನಿಸಿದ್ದರು.
ಹೀಗಿದ್ದರೂ ಸ್ತಳಿಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ಸೂಚಿಸಿದ್ದಾರೆ. ಇಂದು ಮುಂಜಾನೆ 6ಗಂಟೆಯಿಂದ ಸಂಜೆ ೬ಗಂಟೆಯವರೆಗೆ ನಗರದ ಎಲ್ಲಾ ಅಂಗಡಿಗಳನ್ನು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಅದಲ್ಲದೇ ಇಂದು ೧೦.೩೦ರ ವೇಳೆಗೆ ರಾಕ್ಷಸ ಮಂಟಪ ವೃತ್ತದ ಬಳಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಪ್ರತಿಭಟನೆ ಹಮ್ಮಿಕೋಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಿಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು. ಹಾಗೂ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕು ಎಂದು ಆಗ್ರಹಿಸಲು ಮುಂದಾಗಿದ್ದಾರೆ.
ಆಗಮಿಕರು ಯೂಟರ್ನ್ ಮೇಲೆ ಯೂಟರ್ನ್ : ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಬದಿಂದ ಇಂದಿನವರೆಗೆ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತರ ಹೇಳಿಕೆ ಗೊಂದಲದ ಮೇಲೆ ಗೊಂದಲಗಳನ್ನು ಹುಟ್ಟುಹಾಕುತ್ತಿದೆ. ಅಂಧಕಾಸುರನ ಸಂಹಾರದ ವೇಳೆ ನಡೆದ ಘಟನೆಯ ಮರುದಿನ ದೇವಾಲಯದ ಮುಂಭಾಗ ಶ್ರೀಕಂಠೇಶ್ವರ ಭಕ್ತ ಮಂಡಳಿ ನಡೆಸಿದ್ದ ಪ್ರತಿಭಟನೆಯಲ್ಲಿ ದೇವಾಲಯದ ಅರ್ಚಕರು ಭಾಗಿಯಾಗಿ ಬೆಂಬಲ ನೀಡಿದ್ದರು. ಈ ವೇಳೆ ಮಾತನಾಡಿದ್ದ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್, ದೇವರಿಗೆ ಅಪವಿತ್ರ ನೀರು ಎರಚುವ ಮೂಲಕ ಕಿಡಿಗೇಡಿಗಳು ಮಾಡಿರುವ ಅಪಮಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.
ಜಿಲ್ಲಾಡಳಿತ ಲೋಕಸಭಾ ಚುನಾವಣಾ ಸಿದ್ದತೆಯಲ್ಲಿ ತೊಡಗಿರುವುದರಿಂದ ಶಾಂತಿ ಸಭೆ ಕರೆಯಲು ವಿಳಂಬವಾಗಿದೆ ಎಂದರು. ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಘಟನೆಗೆ ಸಂಬಂಧಪಟ್ಟಂತೆ ತನಿಖೆ ಪ್ರಾರಂಭವಾಗಿದೆ. ತನಿಖೆ ಸಂಪೂರ್ಣವಾಗಲು ಇನ್ನೂ ಕಾಲಾವಕಾಶ ಬೇಕಾಗಿದೆ. ಹೀಗಾಗಿ ತನಿಖೆ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ.
-ಎಡಿಸಿ, ಲೋಕನಾಥ್
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…