ನಂಜನಗೂಡು: ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಘಟನೆ ವಿರೋಧಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಇಂದು ಕರೆದಿದ್ದ ನಂಜನಗೂಡು ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿರುವುದ ಕಂಡುಬಂದಿದೆ.
ಬಂದ್ಗೆ ಸಂಬಂಧಿಸಿದಂತೆ ನಿನ್ನೆ ನಂಜನಗೂಡು ತಾಲೂಕು ಆಡಳಿತ ಮಂಡಳಿಯಲ್ಲಿ ಎಡಿಸಿ ನೇತೃತ್ವದಲ್ಲಿ ಶಾಂತಿ ಸಭೆಯಲ್ಲಿ ಕರೆಯಲಾಗಿದ್ದು, ಬಂದ್ಗೆ ಯಾವುದೆ ಅನುಮತಿ ನೀಡಲಾಗುವುದಿಲ್ಲ. ಯಾರು ಬಂದ್ ಮಾಡುವಹಾಗಿಲ್ಲ ಎಂದು ಖಡಕ್ ಎಚ್ಚರಿಕೆಯನ್ನು ಎಡಿಸಿ ರವಾನಿಸಿದ್ದರು.
ಹೀಗಿದ್ದರೂ ಸ್ತಳಿಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ಸೂಚಿಸಿದ್ದಾರೆ. ಇಂದು ಮುಂಜಾನೆ 6ಗಂಟೆಯಿಂದ ಸಂಜೆ ೬ಗಂಟೆಯವರೆಗೆ ನಗರದ ಎಲ್ಲಾ ಅಂಗಡಿಗಳನ್ನು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಅದಲ್ಲದೇ ಇಂದು ೧೦.೩೦ರ ವೇಳೆಗೆ ರಾಕ್ಷಸ ಮಂಟಪ ವೃತ್ತದ ಬಳಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಪ್ರತಿಭಟನೆ ಹಮ್ಮಿಕೋಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಿಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು. ಹಾಗೂ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕು ಎಂದು ಆಗ್ರಹಿಸಲು ಮುಂದಾಗಿದ್ದಾರೆ.
ಆಗಮಿಕರು ಯೂಟರ್ನ್ ಮೇಲೆ ಯೂಟರ್ನ್ : ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಬದಿಂದ ಇಂದಿನವರೆಗೆ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತರ ಹೇಳಿಕೆ ಗೊಂದಲದ ಮೇಲೆ ಗೊಂದಲಗಳನ್ನು ಹುಟ್ಟುಹಾಕುತ್ತಿದೆ. ಅಂಧಕಾಸುರನ ಸಂಹಾರದ ವೇಳೆ ನಡೆದ ಘಟನೆಯ ಮರುದಿನ ದೇವಾಲಯದ ಮುಂಭಾಗ ಶ್ರೀಕಂಠೇಶ್ವರ ಭಕ್ತ ಮಂಡಳಿ ನಡೆಸಿದ್ದ ಪ್ರತಿಭಟನೆಯಲ್ಲಿ ದೇವಾಲಯದ ಅರ್ಚಕರು ಭಾಗಿಯಾಗಿ ಬೆಂಬಲ ನೀಡಿದ್ದರು. ಈ ವೇಳೆ ಮಾತನಾಡಿದ್ದ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್, ದೇವರಿಗೆ ಅಪವಿತ್ರ ನೀರು ಎರಚುವ ಮೂಲಕ ಕಿಡಿಗೇಡಿಗಳು ಮಾಡಿರುವ ಅಪಮಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.
ಜಿಲ್ಲಾಡಳಿತ ಲೋಕಸಭಾ ಚುನಾವಣಾ ಸಿದ್ದತೆಯಲ್ಲಿ ತೊಡಗಿರುವುದರಿಂದ ಶಾಂತಿ ಸಭೆ ಕರೆಯಲು ವಿಳಂಬವಾಗಿದೆ ಎಂದರು. ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಘಟನೆಗೆ ಸಂಬಂಧಪಟ್ಟಂತೆ ತನಿಖೆ ಪ್ರಾರಂಭವಾಗಿದೆ. ತನಿಖೆ ಸಂಪೂರ್ಣವಾಗಲು ಇನ್ನೂ ಕಾಲಾವಕಾಶ ಬೇಕಾಗಿದೆ. ಹೀಗಾಗಿ ತನಿಖೆ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ.
-ಎಡಿಸಿ, ಲೋಕನಾಥ್
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…