ರಾಜ್ಯ

ನಂಜನಗೂಡು ಬಂದ್‌ಗೆ ಸಾರ್ವಜನಿಕರ ಬೆಂಬಲ : ಯೂಟರ್ನ್‌ ಹೊಡೆದ ದೇವಾಲಯದ ಆಗಮಿಕರು

ನಂಜನಗೂಡು: ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಘಟನೆ ವಿರೋಧಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಇಂದು ಕರೆದಿದ್ದ ನಂಜನಗೂಡು ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿರುವುದ ಕಂಡುಬಂದಿದೆ.

ಬಂದ್‌ಗೆ ಸಂಬಂಧಿಸಿದಂತೆ ನಿನ್ನೆ ನಂಜನಗೂಡು ತಾಲೂಕು ಆಡಳಿತ ಮಂಡಳಿಯಲ್ಲಿ ಎಡಿಸಿ ನೇತೃತ್ವದಲ್ಲಿ ಶಾಂತಿ ಸಭೆಯಲ್ಲಿ ಕರೆಯಲಾಗಿದ್ದು, ಬಂದ್‌ಗೆ ಯಾವುದೆ ಅನುಮತಿ ನೀಡಲಾಗುವುದಿಲ್ಲ. ಯಾರು ಬಂದ್‌ ಮಾಡುವಹಾಗಿಲ್ಲ ಎಂದು ಖಡಕ್‌ ಎಚ್ಚರಿಕೆಯನ್ನು ಎಡಿಸಿ ರವಾನಿಸಿದ್ದರು.

ಹೀಗಿದ್ದರೂ ಸ್ತಳಿಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇಂದು ಮುಂಜಾನೆ 6ಗಂಟೆಯಿಂದ ಸಂಜೆ ೬ಗಂಟೆಯವರೆಗೆ ನಗರದ ಎಲ್ಲಾ ಅಂಗಡಿಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಅದಲ್ಲದೇ ಇಂದು ೧೦.೩೦ರ ವೇಳೆಗೆ ರಾಕ್ಷಸ ಮಂಟಪ ವೃತ್ತದ ಬಳಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಪ್ರತಿಭಟನೆ ಹಮ್ಮಿಕೋಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಿಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು. ಹಾಗೂ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕು ಎಂದು ಆಗ್ರಹಿಸಲು ಮುಂದಾಗಿದ್ದಾರೆ.

ಆಗಮಿಕರು ಯೂಟರ್ನ್‌ ಮೇಲೆ ಯೂಟರ್ನ್‌ : ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಬದಿಂದ ಇಂದಿನವರೆಗೆ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತರ ಹೇಳಿಕೆ ಗೊಂದಲದ ಮೇಲೆ ಗೊಂದಲಗಳನ್ನು ಹುಟ್ಟುಹಾಕುತ್ತಿದೆ. ಅಂಧಕಾಸುರನ ಸಂಹಾರದ ವೇಳೆ ನಡೆದ ಘಟನೆಯ ಮರುದಿನ  ದೇವಾಲಯದ ಮುಂಭಾಗ ಶ್ರೀಕಂಠೇಶ್ವರ ಭಕ್ತ ಮಂಡಳಿ ನಡೆಸಿದ್ದ ಪ್ರತಿಭಟನೆಯಲ್ಲಿ ದೇವಾಲಯದ ಅರ್ಚಕರು ಭಾಗಿಯಾಗಿ ಬೆಂಬಲ ನೀಡಿದ್ದರು. ಈ ವೇಳೆ ಮಾತನಾಡಿದ್ದ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್‌, ದೇವರಿಗೆ ಅಪವಿತ್ರ ನೀರು ಎರಚುವ ಮೂಲಕ ಕಿಡಿಗೇಡಿಗಳು ಮಾಡಿರುವ ಅಪಮಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.ಆದರೆ ಇದೀಗ ಯೂಟರ್ನ್‌ ಹೊಡೆದಿರುವ ಆಗಮಿಕರು, ನಿನ್ನೆ ನಡೆದ ಶಾಂತಿ ಸಭೆ ಬಳಿಕ ಪತ್ರಿಕಾ ಪ್ರಕಟಣೆ ನೀಡುವಾಗ, ನಂಜನಗೂಡು ಶ್ರೀಕಂಠೇಶ್ವರನ ಹೆಸರಿನಲ್ಲೆ ಯಾವುದೇ ಭಕ್ತ ಮಂಡಳಿ ಇಲ್ಲ. ಆ ಹೆಸರಿನಲ್ಲಿ ಕಿಡಿಗೇಡಿಗಳು ಬಂದ್‌ಗೆ ಕರೆ ನೀಡಿದ್ದಾರೆ. ಉತ್ಸವ ಮೂರ್ತಿಯ ಮೇಲೆ ಎಂಜನಲು ನೀರು ಎರಚಲಾಗಿದೆ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಭಕ್ತರು ಇಂಥ ವದಂತಿಗಳಿಗೆ ಕಿವಿಕೊಡಬಾರದು ಎಂದು ಹೇಳುವ ಮೂಲಕ ಹಿಂದೆ ಸರಿದಿದ್ದರು.ಬಳಿಕ ಭಕ್ತರು ಪ್ರಶ್ನೆ ಮಾಡಿದಾಗ, ಉನ್ನತ ಅಧಿಕಾರಿಗಳ ಒತ್ತಡಕ್ಕೆ ಮಡಿದು ಈ ರೀತಿಯ ಹೇಳಿಕೆ ನೀಡಬೇಕಾದ ಸಂದರ್ಭ ಎದುರಾಯಿತು ಎಂದು ಹೇಳುವ ಮೂಲಕ ಭಕ್ತ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಜಿಲ್ಲಾಡಳಿತ ಲೋಕಸಭಾ ಚುನಾವಣಾ ಸಿದ್ದತೆಯಲ್ಲಿ ತೊಡಗಿರುವುದರಿಂದ ಶಾಂತಿ ಸಭೆ ಕರೆಯಲು ವಿಳಂಬವಾಗಿದೆ ಎಂದರು. ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಘಟನೆಗೆ ಸಂಬಂಧಪಟ್ಟಂತೆ ತನಿಖೆ ಪ್ರಾರಂಭವಾಗಿದೆ. ತನಿಖೆ ಸಂಪೂರ್ಣವಾಗಲು ಇನ್ನೂ ಕಾಲಾವಕಾಶ ಬೇಕಾಗಿದೆ. ಹೀಗಾಗಿ ತನಿಖೆ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ.
-ಎಡಿಸಿ, ಲೋಕನಾಥ್‌

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

48 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

50 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

52 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

53 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

58 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago