ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ.
ರಾಜಣ್ಣ ಸತ್ಯ ಹೇಳಿದ್ದಕ್ಕೆ ಈ ಶಿಕ್ಷೆಯಾಗಿದೆ. ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕೆಂದು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಕರ್ನಾಟಕದಲ್ಲಿ ಚುನಾವಣೆ ತಯಾರಿ ವೇಳೆ ಕಾಂಗ್ರೆಸ್ ಸರ್ಕಾರವೇ ಇತ್ತು. ಲೋಕಸಭಾ ಚುನಾವಣೆ ತಯಾರಿ ನಡೆದಾಗಲೂ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿತ್ತು. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ ಅಂದರೆ ಪರಿಶೀಲನೆ ಮಾಡಬೇಕಿತ್ತು ಎಂದು ರಾಜಣ್ಣ ಹೇಳಿದ್ದಾರೆ. ರಾಜೀನಾಮೆ ಕೇಳದೇ ರಾಜಣ್ಣ ಅವರನ್ನು ಸಂಪುಟದಿಂದ ಹೊರದಬ್ಬಿದ್ದಾರೆ. ಇದಕ್ಕೆಲ್ಲಾ ಕಾರಣ ರಾಹುಲ್ ಗಾಂಧಿ ಎಂದು ವಾಗ್ದಾಳಿ ನಡೆಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…