ರಾಜ್ಯ

ಕುರ್ಚಿ ಬಡಿದಾಟ ಬದಿಗೊತ್ತಿ, ಕಬ್ಬು ಬೆಳೆಗಾರದ ಸಮಸ್ಯೆ ಬಗೆಹರಿಸಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕುರ್ಚಿ ಬಡಿದಾಟವನ್ನು ಬದಿಗೊತ್ತಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಮುಂದಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಅನೇಕ ಸಚಿವರು ಕುರ್ಚಿ ಕಿತ್ತಾಟ, ಬಣ ಬಡಿದಾಟ, ನವೆಂಬರ್ ಕ್ರಾಂತಿಯಲ್ಲೇ ಮುಳುಗಿದ್ದಾರೆ. ಅನ್ನದಾತರ ಸಮಸ್ಯೆಗಳನ್ನು ಕೇಳುವವರು ಯಾರು? ಎಂದು ಪ್ರಶ್ನೆ ಮಾಡಿದರು.

ನಿಮ್ಮ ಕುರ್ಚಿ ಉಳಿಯುತ್ತದೆಯೋ ಬಿಡುತ್ತದೆಯೋ ಅಥವಾ ನವೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆಯೋ? ಅದು ಜನತೆಗೆ ಬೇಡವಾದ ವಿಷಯ. ಮೊದಲು ಬೆಳಗಾವಿ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸಿ, ಸಮಸ್ಯೆಯನ್ನು ಇತ್ಯರ್ಥಪಡಿಸಬೇಕೆಂದು ಮನವಿ ಮಾಡಿದರು.

ಇದನ್ನು ಓದಿ: ತೆಲಂಗಾಣದಲ್ಲಿ ರಸ್ತೆ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

ನಾನು ಸಿಎಂ ಮತ್ತು ಡಿಸಿಎಂಗೆ ಮನವಿ ಮಾಡುವುದೇನೆಂದರೆ, ನಿಮ್ಮ ಕಿತ್ತಾಟದಲ್ಲಿ ರೈತರು ಬೀದಿಗೆ ಬೀಳುವುದು ಬೇಡ. ಕ್ರಾಂತಿಯಾದರೂ ಆಗಲಿ ಮೊದಲು ಅನ್ನದಾತರ ಸಮಸ್ಯೆಯನ್ನು ಪರಿಹರಿಸಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ದರೂ ಸರ್ಕಾರ ಅದರ ಬಗ್ಗೆ ಗಮನ ಹರಿಸುತ್ತಿಲ್ಲ. ಬರೀ ಕೇಂದ್ರವನ್ನು ದೂಷಿಸುತ್ತಲೇ ಕಾಲ ಕಳೆಯುತ್ತಿದೆ. ಸಮಸ್ಯೆ ಹಾಗೂ ರೈತರಿಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿಲ್ಲ. ರಾಜ್ಯದ ಕೆಲವು ಕಡೆ ಕಬ್ಬು ಬೆಳೆಗಾರರ ಪ್ರತಿಭಟನೆ ನಡೆಯುತ್ತಿದೆ. ಸರ್ಕಾರ ಅಥವಾ ಸಚಿವರಾಗಲಿ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಒಟ್ಟಾರೆ ಈ ನಾಡಿನ ರೈತರ ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಚಕಾರ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago