ತುಮಕೂರು: ರಾಜ್ಯದಲ್ಲಿ ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ನೋಡಿಕೊಂಡು ಅವರ ಭಾವಚಿತ್ರವನ್ನು ತಮ್ಮ ನೂತನ ಸಂಸದರ ಕಛೇರಿಯಲ್ಲಿ ಹಾಕುವಂತೆ ಕೆಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಮ್ಮ ಸಿಬ್ಬಂದಿಗೆ ಸಲಹೆ ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಆರಂಭಿಸಿರುವ ಕಛೇರಿಗೆ ನಿನ್ನೆ(ಆ.19) ಭೇಟಿ ನೀಡಿದ ಸಮಯದಲ್ಲಿ ಅವರು ಈ ರೀತಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಛೇರಿಯಲ್ಲಿ ಸಿದ್ದತೆ ಪರಿಶೀಲಿಸಿದ ಸಮಯದಲ್ಲಿ ಕಛೇರಿಯ ಪಡಸಾಲೆ ಗೋಡೆಗೆ ಮುಂದಿನ ಮುಖ್ಯಮಂತ್ರಿ ಭಾವಚಿತ್ರ ಹಾಕುವಂತೆ ತಮ್ಮ ಸಿಬ್ಬಂದಿಗೆ ಹೇಳಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರು ಇಲ್ಲ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…