ರಾಜ್ಯ

ಪಾಕ್‌ ಪರ ಘೋಷಣೆ ಕೂಗಿದವರನ್ನು ಜೈಲಿಗೆ ಹಾಕಲು ಅಂಜಿಕೆ ಏಕೆ?; ಪ್ರತಾಪ್‌ ಸಿಂಹ

ಮೈಸೂರು: ವಿಧಾನ ಸೌಧದ ಮುಂಭಾಗ ಪಾಕಿಸ್ತಾನ್‌ ಜಿಂದಾಬಾಜ್‌ ಎಂದು ಘೊಷಣೆ ಕೂಗಿದವರನ್ನು ಜೈಲಿಗೆ ಹಾಕಲು ಹಿಂಜರಿಕೆ ಯಾಕೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಒಸಾಮ ಬಿನ್‌ ಲಾಡೆನ್‌, ಮುಲ್ಲಾ, ಉಮರ್‌ ಆಳ್ವಿಕೆಯಿದ್ದು, ಬಾಂಬ್‌ ಹಾಕುವವರಿಗೆ ಅವರು ರಕ್ಷಣೆ ಕೊಟುತ್ತಾರೆ ಹೊರತು, ಬಂಧಿಸುವ ಕೆಲಸ ಮಾಡುವುದಿಲ್ಲ. ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ.

ಈ ಸಂಬಂಧದಲ್ಲಿ ರಾಜ್ಯ ಬಿಜೆಪಿ ಸೋಷಿಯಲ್‌ ಮೀಡಿಯಾದಲ್ಲಿ ಎಫ್‌ಎಸ್‌ಎಲ್‌ ಮಾಹಿತಿ ನೀಡಿದ್ದರು, ಅದನ್ನು ತಿರುಚಲಾಗಿದೆ ಎಂದು ಹೇಳಿಕೆ ನೀಡಿ ಲಜ್ಜೆಗಟ್ಟು ಡಿಫೆಂಡ್‌ ಮಾಡುವು ಅವಶ್ಯಕತೆ ಏನಿದೆ. ಯಾರು ಪಾಕಿಸ್ತಾನ್‌ ಜಿಂದಾಬಾಜ್‌ ಎಂದು ಹೇಳುತ್ತಾನೋ ಅವನನ್ನು ಒಳಗೆ ಹಾಕಲು ಸರ್ಕಾರಕ್ಕೆ ಅಂಜಿಕೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಸ್ಲಿಮರ ಕೈ ಕಡೆದರೂ ಅವರು ಸಿದ್ದರಾಮಯ್ಯ ಅವರಿಗೆ ಮತ ಹಾಕುತ್ತಾರೆ. ಆದರೂ ಮತ್ತೇಕೆ ಸಿಎಂ ಅವರ ರಕ್ಷಣೆ ಮಾಡಲು ಹೊರಟಿದ್ದಾರೆ? ಇದೇ ರೀತಿ ಮುಂದುವರಿದರೆ ಕರ್ನಾಟಕ ಯಾವ ಸ್ಥಿತಿಗೆ ಬರುತ್ತೆ ಯೋಚನೆ ಮಾಡಿ. ಕರ್ನಾಟಕ ಸಭ್ಯ ರಾಜಕಾರಣ ಮತ್ತು ಕಾನೂನು ವ್ಯವಸ್ಥೆಗೆ ಹೆಸರುವಾಗಿಯಾಗಿದೆ. ಇಲ್ಲಿ ಅವರಿಗೆ ಸಹಾಯ ಮಾಡುವುದು ಸರಿಯಲ್ಲ.

ಸಿಎಂ ಅವರು ಪಾಕ್‌ ಪರ ಘೋಷಣೆ ಕೂಗಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಹೇಳಿರುವುದು ಸ್ವಾಗತಾರ್ಹ. ಅದು ಕೇವಲ ಮಾತಿನಲ್ಲಿರದೇ ಕೃತಿಯಲ್ಲು ಅದನ್ನು ತೋರಿ ಎಂದು ಸಂಸದ ಪ್ರತಾಪ್‌ ಸಿಂಹ ಮನವಿ ಮಾಡಿದರು.

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

3 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

3 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

3 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

3 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago