ರಾಜ್ಯ

ಗುಣಮಟ್ಟದ ಕಾಮಗಾರಿಗಳು ಸರ್ಕಾರದ ಮೇಲಿನ ವಿಶ್ವಾಸ ಹೆಚ್ಚಿಸುತ್ತವೆ: ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿದ್ದರೆ, ಲಕ್ಷಾಂತರ ಜನರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಹಾಗೆಯೇ ಸರ್ಕಾರದ ಮೇಲಿನ ವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ ಇಲಾಖೆಗೆ ಇಂಜಿನಿಯರ್‌ಗಳಿಗೆ ಸಚಿವ ಎಸ್.ಎನ್.ಭೋಸರಾಜು ನಿರ್ದೇಶನ ನೀಡಿದರು.

ಬೆಂಗಳೂರು ನಗರದ ಇನ್ಸಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಟೆಕ್ನಿಕಲ್‌ ವರ್ಕ್‌ಶಾಪ್‌ ಆನ್‌ ಕ್ವಾಲಿಟಿ ಮಾನಿಟರಿಂಗ್‌ ವರ್ಕ್‌ಶಾಪ್‌ ಫಾರ್‌ ಇರಿಗೇಷನ್‌ ಇಂಜಿನಿಯರ್ಸ್‌ಗೆ ಚಾಲನೆ ನೀಡಿ ಮಾತನಾಡಿದರು.

ಯಾವುದೇ ಕ್ಷೇತ್ರದಲ್ಲಾಗಲಿ ಗುಣಮಟ್ಟ ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಅದು ತಿನ್ನುವ ಆಹಾರವಿರಲಿ ಅಥವಾ ಬಳಸುವ ಔಷಧಿಯಾಗಿರಲಿ ಗುಣಮಟ್ಟ ಬಹಳ ಮುಖ್ಯ ಎಂದರು.

ದೇಶದಲ್ಲಿ ಶೇ.70ರಷ್ಟು ಜನರು ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ಇವರಿಗೆ ಶಕ್ತಿ ನೀಡುವ ನಿಟ್ಟಿನಲ್ಲಿ ನೀರಾವರಿ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಾಗಾರದಲ್ಲಿ ತಮ್ಮ ಚರ್ಚೆಗಳು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ರೈತರ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ನೀರಾವರಿ ಯೋಜನೆಗಳಲ್ಲಿ ಪ್ರಾಮಾಣಿಕತೆಯಿಂದ ಗುಣಮಟ್ಟದಿಂದ ಕೂಡಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚನೆ ನೀಡಿದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

15 mins ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

20 mins ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

25 mins ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

31 mins ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

11 hours ago