ರಾಜ್ಯ

ಗುಣಮಟ್ಟದ ಕಾಮಗಾರಿಗಳು ಸರ್ಕಾರದ ಮೇಲಿನ ವಿಶ್ವಾಸ ಹೆಚ್ಚಿಸುತ್ತವೆ: ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿದ್ದರೆ, ಲಕ್ಷಾಂತರ ಜನರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಹಾಗೆಯೇ ಸರ್ಕಾರದ ಮೇಲಿನ ವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ ಇಲಾಖೆಗೆ ಇಂಜಿನಿಯರ್‌ಗಳಿಗೆ ಸಚಿವ ಎಸ್.ಎನ್.ಭೋಸರಾಜು ನಿರ್ದೇಶನ ನೀಡಿದರು.

ಬೆಂಗಳೂರು ನಗರದ ಇನ್ಸಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಟೆಕ್ನಿಕಲ್‌ ವರ್ಕ್‌ಶಾಪ್‌ ಆನ್‌ ಕ್ವಾಲಿಟಿ ಮಾನಿಟರಿಂಗ್‌ ವರ್ಕ್‌ಶಾಪ್‌ ಫಾರ್‌ ಇರಿಗೇಷನ್‌ ಇಂಜಿನಿಯರ್ಸ್‌ಗೆ ಚಾಲನೆ ನೀಡಿ ಮಾತನಾಡಿದರು.

ಯಾವುದೇ ಕ್ಷೇತ್ರದಲ್ಲಾಗಲಿ ಗುಣಮಟ್ಟ ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಅದು ತಿನ್ನುವ ಆಹಾರವಿರಲಿ ಅಥವಾ ಬಳಸುವ ಔಷಧಿಯಾಗಿರಲಿ ಗುಣಮಟ್ಟ ಬಹಳ ಮುಖ್ಯ ಎಂದರು.

ದೇಶದಲ್ಲಿ ಶೇ.70ರಷ್ಟು ಜನರು ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ಇವರಿಗೆ ಶಕ್ತಿ ನೀಡುವ ನಿಟ್ಟಿನಲ್ಲಿ ನೀರಾವರಿ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಾಗಾರದಲ್ಲಿ ತಮ್ಮ ಚರ್ಚೆಗಳು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ರೈತರ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ನೀರಾವರಿ ಯೋಜನೆಗಳಲ್ಲಿ ಪ್ರಾಮಾಣಿಕತೆಯಿಂದ ಗುಣಮಟ್ಟದಿಂದ ಕೂಡಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚನೆ ನೀಡಿದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago