ಜಾಗತಿಕ ಹೂಡಿಕೆದಾರರ ಸಮಾವೇಶದ ದುಂಡು ಮೇಜಿನ ಸಭೆಯಲ್ಲಿ ಸಚಿವರ ಅಭಿಪ್ರಾಯ
ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ ತಲೆ ಎತ್ತುತ್ತಿರುವ ಕ್ವಿನ್ ಸಿಟಿಯು ಕೌಶಲ್ಯ ಹಾಗೂ ವೈದ್ಯಕೀಯ ಶಿಕ್ಷಣದ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಇನ್ವೆಸ್ಟ್ ಕರ್ನಾಟಕ) ಮೂರನೇ ದಿನವಾದ ಗುರುವಾರ “ಕ್ವಿನ್ ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಸಂಯೋಜಿಸುವುದು” ಎಂಬ ವಿಷಯದ ಕುರಿತ ನಡೆದ ದುಂಡು ಮೇಜಿನ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ಮಂಡಿಸಿದರು.
ಕ್ರಿಯಾಶೀಲತೆ, ನಾವೀನ್ಯತೆಗೆ ಆದ್ಯತೆ ಕ್ವಿನ್ ಸಿಟಿಯಲ್ಲಿ ಕ್ರಿಯಾಶೀಲತೆ ಹಾಗೂ ನಾವೀನ್ಯತೆಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಜೀವ ವಿಜ್ಞಾನಗಳು, ಸೆಮಿಕಂಡಕ್ಟರ್ಗಳು, ಏರೋಸ್ಪೇಸ್, ಸುಧಾರಿತ ಉತ್ಪಾದನೆಯಂತಹ ಮುಂದುವರಿದ ಕ್ಷೇತ್ರಗಳಿಗೆ ವಿಫುಲ ಅವಕಾಶಗಳಿವೆ. ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಸರ್ಕಾರಿ ಸಂಸ್ಥೆಗಳ ನಡುವೆ ನಾವೀನ್ಯತೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಸಹಯೋಗಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.
ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್ ತಯಾರಿಕೆ, ಜೈವಿಕ ಇಂಜಿನಿಯರಿಂಗ್ ಮತ್ತು ಸುಸ್ಥಿರತೆ, ಉದ್ಯಮ ನೇತೃತ್ವದ ಕೌಶಲ್ಯ ಕಾರ್ಯಕ್ರಮಗಳನ್ನು ಇಲ್ಲಿ ಆರಂಭಿಸಲಾಗುವುದು. ಇದಕ್ಕಾಗಿ ಜಾಗತಿಕ ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ಗಳನ್ನು ಸ್ಥಾಪಿಸಲು ಆಹ್ವಾನಿಸಲಾಗುವುದು. ಇದರಿಂದ ಕರ್ನಾಟಕವು “ಪ್ರತಿಭಾ ಕಣಜ”ವಾಗಲಿದೆ. ಇದಕ್ಕೆ ಅಂತರಾಷ್ಟ್ರೀಯ ಮಾನ್ಯತೆಯೂ ದೊರೆಯಲಿದೆ ಎಂದು ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.
ಕೌಶಲ್ಯಾಧರಿತ ಶಿಕ್ಷಣ
ಕರ್ನಾಟಕದಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಕೈಗಾರಿಕಾ ತರಬೇತಿ ಸಂಸ್ಥೆ (ITI) ಮತ್ತು 80ಕ್ಕೂ ಹೆಚ್ಚು ಪಾಲಿಟೆಕ್ನಿಕ್ಗಳಿವೆ ಇಲ್ಲಿ ವೃತ್ತಿ ಶಿಕ್ಷಣ ಹಾಗೂ “ಸ್ಕಿಲ್ ಲೋಕಲ್, ವರ್ಕ್ ಗ್ಲೋಬಲ್” ಧ್ಯೇಯದೊಂದಿಗೆ ಕೌಶಲ್ಯಾಧರಿತ ಶಿಕ್ಷಣ ಮತ್ತು ತರಬೇತಿಯನ್ನು ನೀಡಲಾಗುತ್ತಿದೆ. ಕ್ವಿನ್ ಸಿಟಿಯಿಂದ ಹೆಚ್ಚು ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ವಿವರಿಸಿದರು.
ಕರ್ನಾಟಕವು AI, ಆಳವಾದ ತಂತ್ರಜ್ಞಾನ ಮತ್ತು ಜಾಗತಿಕ ಕೌಶಲ್ಯ ಕೇಂದ್ರವಾಗಲು ಸಜ್ಜಾಗಿವೆ. ಕರ್ನಾಟಕ ಸ್ಕಿಲ್ ಕನೆಕ್ಟ್ ಪೋರ್ಟಲ್ನಂತಹ ಡಿಜಿಟಲ್ ಪ್ಲಾಟ್ ಫಾರ್ಮ್ಗಳು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗದಾತರೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಕ್ವಿನ್ ಸಿಟಿಯಲ್ಲಿ ಐಟಿ ಮತ್ತು ಡಿಜಿಟಲ್ ಸ್ಕಿಲ್ಸ್ (ಕೋಡಿಂಗ್, AI, ಡೇಟಾ ಸೈನ್ಸ್, ಸೈಬರ್ ಸೆಕ್ಯುರಿಟಿ), ಆರೋಗ್ಯ ಮತ್ತು ಜೈವಿಕ ತಂತ್ರಜ್ಞಾನ (ನರ್ಸಿಂಗ್, ಅರೆವೈದ್ಯಕೀಯ ಮತ್ತು ಔಷಧೀಯ ತರಬೇತಿ), ರೊಬೊಟಿಕ್ಸ್ ತಯಾರಿಕೆ (ಯಾಂತ್ರೀಕೃತಗೊಂಡ ತರಬೇತಿ, CNC ಯಂತ್ರ, ಮತ್ತು ನಿರ್ದಿಷ್ಟ ಇಂಜಿನಿಯರಿಂಗ್) ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಚರ್ಚಾಗೋಷ್ಠಿಯಲ್ಲಿ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಉದ್ಯಮಿಗಳು, ಇತರರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…