ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು.
ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್, 2021ರಲ್ಲಿ 7051 ಹೆಕ್ಟೇರ್ ಮತ್ತು 2024 ರಲ್ಲಿ 12500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ.
ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು.
ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು.
ಅಬಕಾರಿ ಸಚಿವ ಆರ್. ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…