ರಾಜ್ಯ

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ: ತನಿಖೆಗೆ ಆಗ್ರಹಿಸಿದ ಆರ್.ಅಶೋಕ್‌

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್‌ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕಳೆದ ಮಂಗಳವಾರ ನಡೆಸಿದೆ. ಆದರೆ ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಇರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಪಿಎಸ್‌ಸಿ ಪ್ರಕಟಣೆ ಹೊರಡಿಸಿರುವ ಬಗ್ಗೆಯೂ ಇದೀಗ ಆಕ್ರೋಶ ಭುಗಿಲೆದ್ದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತೆ ಕೆಪಿಎಸ್‌ಸಿ ಪ್ರಶ್ನೆಪತ್ರಿಕೆಯ ತುಂಬಾ ಕಣ್ಣಿಗೆ ಕುಕ್ಕುವ ಹಾಗೆ ಕಾಣುತ್ತಿರುವ ಲೋಪದೋಷಗಳು ಎಲ್ಲೆಡೆ ಹರಿದಾಡುತ್ತಿವೆ.

ಎಲ್ಲೆಡೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ದೋಷಗಳಿಗೆ, ಭಾಷಾಂತರ ತಪ್ಪುಗಳಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೊರಡಿಸಿರುವ ಪ್ರಕಟಣೆ ಅತ್ಯಂತ ಹಾಸ್ಯಾಸ್ಪದ ಎಂದು ಕಿಡಿಕಾರಿದ್ದಾರೆ.

ಪ್ರಶ್ನೆ ಪತ್ರಿಕೆ ತಯಾರಾದ ನಂತರ ನುರಿತ ಸಂಪನ್ಮೂಲ ವ್ಯಕ್ತಿಗಳ ಕೈಯಲ್ಲಿ ಅದನ್ನು ರೀಡ್‌ ಮಾಡಿಸಬೇಕಿತ್ತು. ಲೋಪದೋಷಗಳಿದ್ದರೆ ಅದನ್ನು ತಿದ್ದುಪಡಿ ಮಾಡಿದ ನಂತರ ಪ್ರಶ್ನೆಪತ್ರಿಕೆ ಅಂತಿಮಗೊಳಿಸಬೇಕಿತ್ತು. ಆಗ ಇಡೀ ವ್ಯವಸ್ಥೆ ನಗೆಪಾಟಲಿಗೆ ಈಡಾಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಜವಾಬ್ದಾರರಾದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾರ್ಥಿಗಳಿಗೆ ಸ್ಪಷ್ಟನೆ ನೀಡಬೇಕು. ಮುಂದಿನ ನಡೆಯ ಬಗ್ಗೆ ಮಾಹಿತಿ ನೀಡಲೇಬೇಕು. ಕೆಪಿಎಸ್‌ಸಿ ವ್ಯವಸ್ಥೆಗೆ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

5 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

8 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

8 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

8 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

8 hours ago