ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕಳೆದ ಮಂಗಳವಾರ ನಡೆಸಿದೆ. ಆದರೆ ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಇರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಪಿಎಸ್ಸಿ ಪ್ರಕಟಣೆ ಹೊರಡಿಸಿರುವ ಬಗ್ಗೆಯೂ ಇದೀಗ ಆಕ್ರೋಶ ಭುಗಿಲೆದ್ದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತೆ ಕೆಪಿಎಸ್ಸಿ ಪ್ರಶ್ನೆಪತ್ರಿಕೆಯ ತುಂಬಾ ಕಣ್ಣಿಗೆ ಕುಕ್ಕುವ ಹಾಗೆ ಕಾಣುತ್ತಿರುವ ಲೋಪದೋಷಗಳು ಎಲ್ಲೆಡೆ ಹರಿದಾಡುತ್ತಿವೆ.
ಎಲ್ಲೆಡೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ದೋಷಗಳಿಗೆ, ಭಾಷಾಂತರ ತಪ್ಪುಗಳಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೊರಡಿಸಿರುವ ಪ್ರಕಟಣೆ ಅತ್ಯಂತ ಹಾಸ್ಯಾಸ್ಪದ ಎಂದು ಕಿಡಿಕಾರಿದ್ದಾರೆ.
ಪ್ರಶ್ನೆ ಪತ್ರಿಕೆ ತಯಾರಾದ ನಂತರ ನುರಿತ ಸಂಪನ್ಮೂಲ ವ್ಯಕ್ತಿಗಳ ಕೈಯಲ್ಲಿ ಅದನ್ನು ರೀಡ್ ಮಾಡಿಸಬೇಕಿತ್ತು. ಲೋಪದೋಷಗಳಿದ್ದರೆ ಅದನ್ನು ತಿದ್ದುಪಡಿ ಮಾಡಿದ ನಂತರ ಪ್ರಶ್ನೆಪತ್ರಿಕೆ ಅಂತಿಮಗೊಳಿಸಬೇಕಿತ್ತು. ಆಗ ಇಡೀ ವ್ಯವಸ್ಥೆ ನಗೆಪಾಟಲಿಗೆ ಈಡಾಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಜವಾಬ್ದಾರರಾದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾರ್ಥಿಗಳಿಗೆ ಸ್ಪಷ್ಟನೆ ನೀಡಬೇಕು. ಮುಂದಿನ ನಡೆಯ ಬಗ್ಗೆ ಮಾಹಿತಿ ನೀಡಲೇಬೇಕು. ಕೆಪಿಎಸ್ಸಿ ವ್ಯವಸ್ಥೆಗೆ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…