ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಹೀಗಿರುವಾಗ ಯಾವ ಮುಖವನ್ನಿಟ್ಟುಕೊಂಡು ರಾಜ್ಯಪಾಲರರಿಂದ ಸರ್ಕಾರದ ಸಾಧನೆ ಹೊಗಳಿಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ವಿಧಾನಸಭೆ ಬಜೆಟ್ ಅಧಿವೇಶನದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ದಮನ ಮಾಡುತ್ತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಅತಿ ಹೆಚ್ಚು ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್. ಈಗ ಸರ್ಕಾರ, ರಾಜ್ಯಪಾಲರ ಹಲವು ಅಧಿಕಾರ ಮೊಟಕು ಮಾಡುತ್ತಿದೆ. ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.
ರಾಜ್ಯಪಾಲರು ಅನೇಕ ಮಸೂದೆಗಳ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ನೀಡಿ ಎಂದು ಕೇಳಿದರೆ, ಸ್ಪಷ್ಟನೆ ನೀಡದೆ ಬೊಬ್ಬೆ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಕಾಂಗ್ರೆಸ್ ನಾಯಕರು ಯಾವ ರಾಜ್ಯಪಾಲರಿಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೋ ಇಂದು ಅದೇ ರಾಜ್ಯಪಾಲರಿಂದ ಸರ್ಕಾರವನ್ನು ಹೊಗಳಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಯಾವ ಮುಖವನ್ನಿಟ್ಟುಕೊಂಡು ರಾಜ್ಯಪಾಲರಿಂದ ಸರ್ಕಾರದ ಸಾಧನೆ ಹೇಳಿಸಿಕೊಳ್ಳುತ್ತಾರೆ. ರಾಜ್ಯಪಾಲರು ಸರಿ ಇಲ್ಲವೆಂದು ಹೇಳಿ ಅವರಿಂದಲೇ ಹೊಗಳಿಸಿಕೊಳ್ಳುತ್ತಿರುವುದು ನಾಚಿಕೆಯ ಸಂಗತಿ ಎಂದು ಕಿಡಿಕಾರಿದ್ದಾರೆ.
ಇನ್ನು ಈ ವಿಚಾರ ಇಟ್ಟುಕೊಂಡು ನಾವು ಇಂದು ಶಾಸಕರ ಭವನದಿಂದ ವಿಧಾನಸೌಧವರೆಗೆ ಪಾದಯಾತ್ರೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಲ್ಲ. ಅವರ ಭಾಷಣವನ್ನು ನಾವು ಸಮಾಧಾನವಾಗಿಯೇ ಕೇಳುತ್ತೇವೆ. ಆದರೆ ನಾಳೆಯಿಂದ ಸರ್ಕಾರದ ವಿರುದ್ಧ ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…