ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಕಟುವಾಗಿ ಟೀಕಿಸಿದರು.
ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಕಿಡಿಕಾರಿದರು.
ಒಂದು ಕುಟುಂಬಕ್ಕೆ 2,000 ರೂ. ನೀಡುತ್ತೇವೆಂದು ಹೇಳಿದ ಕಾಂಗ್ರೆಸ್, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ 2 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್-ಡೀಸೆಲ್ ದರವನ್ನು ನಿರ್ದಾಕ್ಷಿಣ್ಯವಾಗಿ ಏರಿಸಿದ್ದರಿಂದ ಎಲ್ಲ ದರಗಳು ಏರಿಕೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಾದ ಕೂಡಲೇ ಬಸ್ ಟಿಕೆಟ್ ದರ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾರಿಗೆ ನಿಗಮಗಳಿಗೆ ಇನ್ನೂ ಹಣ ಬಾಕಿ ಉಳಿಸಿಕೊಳ್ಳಲಾಗಿದೆ. ಹಾಲಿನ ಪೋತ್ಸಾಹಧನವೂ ಬಾಕಿ ಇದೆ. ಮದ್ಯದ ದರವನ್ನು ಇದೇ ಜುಲೈನಿಂದ ಏರಿಸಲಾಗುತ್ತದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚೊಂಬು ನೀಡುತ್ತಿದೆ ಎಂದು ಕಾಂಗ್ರೆಸ್ ತೋರಿಸಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವೇ ಜನರಿಗೆ ಚೊಂಬು ನೀಡುತ್ತಿದೆ. ಕೇಂದ್ರ ಸರ್ಕಾರದ ಬಳಿ ಹೋಗಿ ಅಲ್ಲಿಯೂ ದ್ವೇಷದ ಕಿಡಿ ಕಾರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಟಾಚಾರಕ್ಕೆ ಸಂಸದರ ಸಭೆ ಕರೆದು ಮಾತಾಡಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಯೋಜನೆಗೆ ಅನುದಾನ ನೀಡಿದರೆ, ಅದಕ್ಕೆ ಸಮನಾಗಿ ತಮ್ಮ ಪಾಲನ್ನು ನೀಡಲು ಕೂಡ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಇಡೀ ಆರ್ಥಿಕ ವ್ಯವಸ್ಥೆಯನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…