ರಾಜ್ಯ

ಅಧಿಕಾರಕ್ಕಾಗಿ ಸಿಎಂ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ: ಆರ್‌.ಅಶೋಕ

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಕಟುವಾಗಿ ಟೀಕಿಸಿದರು.

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಕಿಡಿಕಾರಿದರು.

ಒಂದು ಕುಟುಂಬಕ್ಕೆ 2,000 ರೂ. ನೀಡುತ್ತೇವೆಂದು ಹೇಳಿದ ಕಾಂಗ್ರೆಸ್‌, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ 2 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್‌-ಡೀಸೆಲ್‌ ದರವನ್ನು ನಿರ್ದಾಕ್ಷಿಣ್ಯವಾಗಿ ಏರಿಸಿದ್ದರಿಂದ ಎಲ್ಲ ದರಗಳು ಏರಿಕೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಾದ ಕೂಡಲೇ ಬಸ್‌ ಟಿಕೆಟ್‌ ದರ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾರಿಗೆ ನಿಗಮಗಳಿಗೆ ಇನ್ನೂ ಹಣ ಬಾಕಿ ಉಳಿಸಿಕೊಳ್ಳಲಾಗಿದೆ. ಹಾಲಿನ ಪೋತ್ಸಾಹಧನವೂ ಬಾಕಿ ಇದೆ. ಮದ್ಯದ ದರವನ್ನು ಇದೇ ಜುಲೈನಿಂದ ಏರಿಸಲಾಗುತ್ತದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚೊಂಬು ನೀಡುತ್ತಿದೆ ಎಂದು ಕಾಂಗ್ರೆಸ್‌ ತೋರಿಸಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್‌ ಸರ್ಕಾರವೇ ಜನರಿಗೆ ಚೊಂಬು ನೀಡುತ್ತಿದೆ. ಕೇಂದ್ರ ಸರ್ಕಾರದ ಬಳಿ ಹೋಗಿ ಅಲ್ಲಿಯೂ ದ್ವೇಷದ ಕಿಡಿ ಕಾರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಟಾಚಾರಕ್ಕೆ ಸಂಸದರ ಸಭೆ ಕರೆದು ಮಾತಾಡಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಯೋಜನೆಗೆ ಅನುದಾನ ನೀಡಿದರೆ, ಅದಕ್ಕೆ ಸಮನಾಗಿ ತಮ್ಮ ಪಾಲನ್ನು ನೀಡಲು ಕೂಡ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಇಡೀ ಆರ್ಥಿಕ ವ್ಯವಸ್ಥೆಯನ್ನು ಕಾಂಗ್ರೆಸ್‌ ಸರ್ಕಾರ ಹಾಳು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

11 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago