ಮಂಗಳೂರು: ರಾಜ್ಯದಲ್ಲಿರುವುದು ತಾಲಿಬಾನ್ ಸರ್ಕಾರವೇ ಹೊರತು ಪ್ರಜಾಪ್ರಭುತ್ವ ಸರ್ಕಾರಲ್ಲ. ಇಂತಹ ಕೆಟ್ಟ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕೇಡುಗಾಲ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿಂದು (ಜು.14) ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಮೈಸೂರು ಮುಡಾದಲ್ಲಿ ಭಾರೀ ಹಗರಣವೇ ನಡೆದಿದೆ. ಸಿಎಂ ಸಿದ್ದರಾಮಯ್ಯ ಎಲ್ಲವನ್ನು ತಿಂದು ತೇಗಿದ್ದಾರೆ. ದಲಿತರ ಭೂಮಿಗಳನ್ನು ಕಸಿದುಕೊಂಡಿದ್ದು, ಅರ್ಜಿ ಸಲ್ಲಿಸಿರುವ ಎಷ್ಟೋ ಜನರಿಗೆ ಈವರೆಗೆ ಸೈಟ್ಗಳು ಸಿಕ್ಕಿಲ್ಲ ಎಂದರು.
ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಇತಿಹಾಸದಲ್ಲಿಯೇ ಈ ರೀತಿಯ ಹಗರಣ ನಡೆದಿಲ್ಲ. ಯಾವ ಸರ್ಕಾರವು ದಲಿತರ ಹಣವನ್ನು ನುಂಗಿಲ್ಲ ಈ ಸರ್ಕಾರವನ್ನು ಬಿಟ್ಟು. ದಲಿತರ ಹಣ ಚಿನ್ನದ ಅಂಗಡಿ, ಬಾರ್ಗಳಿಗೆ ಹೋಗಿದೆ. ಇದೇ ಹಣದಲ್ಲಿ ಜಮೀನು ಕೂಡಾ ಖರೀದಿಸಲಾಗಿದೆ ಎಂದು ಆರ್ ಅಶೋಕ್ ಆರೋಪ ಮಾಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…