ರಾಜ್ಯ

ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್‌ ನೋಟ್‌ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ‌ ಕೊಡುವಂತೆ ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ದೂರಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ಡೆತ್‌ನೋಟ್‌ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಕೂಡ ಇಲ್ಲಿ ಹೊಣೆಗಾರರು ಎಂದು ಅವರು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

9 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

10 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

12 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

12 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

15 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

16 hours ago