ರಾಜ್ಯ

ರಾಜ್ಯ ಸರ್ಕಾರಕ್ಕೆ ಬಡವರ ಮಕ್ಕಳ ಶಿಕ್ಷಣಕ್ಕಿಂತ ಓಲೈಕೆ ರಾಜಕಾರಣವೇ ಹೆಚ್ಚಾಗಿದೆ: ಆರ್‌.ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರಕ್ಕೆ 9 ವಿಶ್ವವಿದ್ಯಾನಿಲಯಗಳಿಗೆ ಅನುದಾನ ನೀಡಲು ಹಣವಿಲ್ಲ, ಆದರೆ ಮುಸ್ಮಲಾನ ಶಿಕ್ಷಣಕ್ಕೆ ಕೊಡಲು 1,200 ಕೋಟಿ ರೂ. ನೀಡಲು ಅನುದಾನವಿದೆ. ಒಟ್ಟಾರೆ ಕಾಂಗ್ರೆಸ್‌ ಸರ್ಕಾರಕ್ಕೆ ಬಡವರ ಮಕ್ಕಳ ಶಿಕ್ಷಣಕ್ಕಿಂತ ಓಲೈಕೆ ರಾಜಕಾರಣವೇ ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 342 ಕೋಟಿ ರೂಪಾಯಿ ಅನುದಾನ ನೀಡಲು ಯೋಗ್ಯತೆ ಇಲ್ಲದೆ ಬಿಜೆಪಿ ಸರ್ಕಾರ 9 ಜಿಲ್ಲೆಗಳಲ್ಲಿ ಆರಂಭಿಸಿದ್ದ ವಿಶ್ವವಿದ್ಯಾಲಯಗಳನ್ನ ಮುಚ್ಚುತ್ತೇವೆ ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್‌ ಸರ್ಕಾರ, ಮುಸ್ಲಿಮರ ಶಿಕ್ಷಣಕ್ಕೆ 1,200 ಕೋಟಿ ರೂಪಾಯಿ ವಿನಿಯೋಗಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಸರ್ಕಾರದ ಬಳಿ 9 ವಿಶ್ವವಿದ್ಯಾಲಯಗಳನ್ನು ಉಳಿಸಿಕೊಳ್ಳಲು 342 ಕೋಟಿ ರೂಪಾಯಿ ಹಣ ಇಲ್ಲ. ಅದೇ ಮುಸ್ಲಿಮರ ಶಿಕ್ಷಣಕ್ಕೆ ಕೊಡಲು 1,200 ಕೋಟಿ ರೂಪಾಯಿ ಇದೆ, ಅಲ್ಲವೇ? ಮುಸ್ಲಿಂ ಮಕ್ಕಳ ಶಿಕ್ಷಣಕ್ಕೆ ಅನುದಾನ ಕೊಡಿ, ಬೇಡ ಅನ್ನಲ್ಲ. ಆದರೆ ಬಡವರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ವಿವಿಗಳನ್ನು ಯಾಕೆ ಮುಚ್ಚುತ್ತೀರಿ? ಬಡವರ ಮಕ್ಕಳ ಉನ್ನತ ಶಿಕ್ಷಣಕ್ಕೆ 342 ಕೋಟಿ ರೂಪಾಯಿ ಖರ್ಚು ಮಾಡಲೂ ಸಾಧ್ಯವಾಗದಷ್ಟು ಪಾಪರ್ ಆಗಿದೆಯಾ ನಿಮ್ಮ ಕಾಂಗ್ರೆಸ್ ಸರ್ಕಾರ? ಬಡವರ ಮಕ್ಕಳ ಶಿಕ್ಷಣಕ್ಕಿಂತ ಓಲೈಕೆ ರಾಜಕಾರಣವೇ ಹೆಚ್ಚಾಗಿರುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ವಾಗ್ದಾಳಿ ನಡೆಸಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದಲ್ಲಿ ದ್ರೋಹ

ದಲಿತ ಸಮುದಾಯದ ನಾಯಕರನ್ನು ತುಳಿಯುತ್ತಲೇ ಮೇಲೆ ಬಂದಿರುವ ಸಿಎಂ ಸಿದ್ದರಾಮಯ್ಯರವರ ದಲಿತ ವಿರೋಧಿ ನೀತಿಗಳು ಅಲ್ಲಿಗೇ ನಿಂತಿಲ್ಲ. ಎರಡನೇ ಬಾರಿ ಅಧಿಕಾರಕ್ಕೆ ಬಂದಾಗಿನಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನ ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್‌ ಕರ್ನಾಟಕ ಈ ವರ್ಷದ ಬಜೆಟ್‌ನಲ್ಲೂ ದ್ರೋಹ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2023-24ರ 11,144 ಕೋಟಿ ರೂ. 2024-25 ರಲ್ಲಿ 14,282 ಕೋಟಿ ರೂಪಾಯಿ ಪರಿಶಿಷ್ಟರ ಹಣವನ್ನ ದುರುಪಯೋಗ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈ ಬಾರಿ 25,000 ಕೋಟಿ ರೂಪಾಯಿ SCSP/TSP ಹಣವನ್ನ ಗ್ಯಾರೆಂಟಿಗಳ ಹೆಸರಿನಲ್ಲಿ ಗುಳುಂ ಮಾಡುವ ಮೂಲಕ ಪರಿಶಿಷ್ಟ ಸಮುದಾಯಗಳಿಗೆ ಮತ್ತೂಮ್ಮೆ ದ್ರೋಹ ಬಗೆಯಲು ಹೊಂಚು ಹಾಕುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

2 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago