ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲ ನಡೆಯುತ್ತಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಇಡೀ ಕಾಂಗ್ರೆಸ್ ಸರ್ಕಾರವೇ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವಾಗ ಪಾರ್ಟ್ ಟೈಂ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ. ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ತಾವು ಚೆನ್ನೈ ಪ್ರವಾಸ ಕೈಗೊಂಡಿರುವುದು ಯಾವ ಪುರುಷಾರ್ಥಕ್ಕಾಗಿ? ಎಂದು ವಾಗ್ದಾಳಿ ನಡೆಸಿದ್ದಾರೆ.
ಮರೀನಾ ಬೀಚ್ ನಲ್ಲಿ ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆಗೆ NOC ನೀಡುವಂತೆ ತಮಿಳುನಾಡು ಸಿಎಂ ಸ್ಟಾಲಿನ್ ಅವರ ಮೇಲೆ ಒತ್ತಡ ಹೇರುತ್ತೀರಾ?, ಮೇಕೆದಾಟು ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಡಿಎಂಕೆ ಪಕ್ಷದ ನಾಯಕರ ನಟ್ಟು-ಬೋಲ್ಟು ಟೈಟು ಮಾಡುತ್ತೀರಾ? ಅಥವಾ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನ ಕೆ.ಆರ್.ಎಸ್ ನಲ್ಲಿ ಕಾವೇರಿ ಆರತಿಗೆ ಆಹ್ವಾನಿಸಿ, ಕಾವೇರಿ ನೀರನ್ನ ಕೊಳ್ಳೆ ಹೊಡೆದು ಕನ್ನಡಿಗರ ಹಿತಾಸಕ್ತಿಗೆ ಕೊಳ್ಳಿ ಇಡುತ್ತೀರಾ?
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…