ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ರೈತರು ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ 3 ತಿಂಗಳಾದರೂ ಹಣ ಜಮೆಯಾಗದ ವಿಷಯದ ಬಗ್ಗೆ ವಿಸ್ತಾರವಾಗಿ ವರದಿ ಮಾಡಿದ್ದ “ಆಂದೋಲನ ದಿನಪತ್ರಿಕೆ” ಸುದ್ದಿಯೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಸರ್ಕಾರದ ನಡೆಗೆ ವಿಪಕ್ಷ ನಾಯಕ ಆರ್ ಅಶೋಕ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
ರೈತರ ಫಸಲಿಗೆ ನ್ಯಾಯಯುತ ಬೆಲೆ ನೀಡುವ ಸಲುವಾಗಿ ಸರ್ಕಾರವು ಬೆಂಬಲ ಬೆಲೆಯಡಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರತಿ ವರ್ಷ ರಾಗಿ ಖರೀದಿ ಮಾಡುತ್ತಿದೆ. ಸರ್ಕಾರದ ಉದ್ದೇಶ ನ್ಯಾಯಯುತವಾಗಿದೆ. ಆದರೆ ರೈತರಿಂದ ಖರೀದಿ ಮಾಡಿದ ಫಸಲಿಗೆ ಸಮಯಕ್ಕೆ ಸರಿಯಾಗಿ ಹಣ ನೀಡದೇ ಇದ್ದ ಕಾರಣ ಜಿಲ್ಲೆಯ ಹಲವು ಭಾಗಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಕುರಿತು ಆಂದೋಲನ ದಿನಪತ್ರಿಕೆ ವಿಶೇಷ ವರದಿ ನೀಡಿತ್ತು. ಇದನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಿಎಂ ಅವರು ತಮ್ಮ ತವರು ಜಿಲ್ಲೆಯ ರೈತರಿಗೆ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಟ್ವೀಟ್ನಲ್ಲೇನಿದೆ?: “ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ರೈತರಿಗೆ ಮೋಸ. ಮೈಸೂರು ಜಿಲ್ಲೆಯಾದ್ಯಂತ ರಾಗಿ ಮಾರಾಟ ಕೇಂದ್ರಗಳಲ್ಲಿ ರೈತರು ರಾಗಿ ಮಾರಾಟ ಮಾಡಿ 3 ತಿಂಗಳಾದರೂ ಇನ್ನೂ ಹಣ ಬಿಡುಗಡೆ ಮಾಡದೆ ಅನ್ನದಾತರ ಸತಾಯಿಸುತ್ತಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ.
ಸಿಎಂ ಸಿದ್ದರಾಮಯ್ಯ ನವರೇ, ಇಂತಹ ಭೀಕರ ಬರಗಾಲದಲ್ಲಿ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಸುಮಾರು 20,000 ರೈತರಿಗೆ ಸೇರಬೇಕಾದ 157 ಕೋಟಿ ರೂಪಾಯಿ ಹಣ ಬಾಕಿ ಉಳಿಸಿಕೊಂಡಿದ್ದೀರಲ್ಲ ರೈತರ ಮೇಲೆ ನಿಮಗೆ ಯಾಕಿಷ್ಟು ಅಸಡ್ಡೆ?” ಎಂದು ಬರೆದುಕೊಂಡಿದ್ದಾರೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…