ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಡಿನ್ನರ್ ಮೀಟಿಂಗ್ ವಿಚಾರ ಕಾವು ಪಡೆದುಕೊಂಡಿದ್ದು, ಸಚಿವ ಕೆ.ಎನ್.ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬಹಿರಂಗ ಸವಾಲು ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,ಅತ್ತ ಕಾಂಗ್ರೆಸ್ ಹೈಕಮಾಂಡ್ ತಮ್ಮ ಜೇಬಿನಲ್ಲಿದೆ ಎನ್ನುವ ರೀತಿ ಗೃಹ ಸಚಿವ ಪರಮೇಶ್ವರ್ ಅವರ ಡಿನ್ನರ್ ಮೀಟಿಂಗ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲೇ ಕೂತು ಕ್ಯಾನ್ಸಲ್ ಮಾಡಿಸಿದ್ದಾರೆ. ಆದರೆ ಇತ್ತ ಸಿಎಂ ಸಿದ್ದರಾಮಯ್ಯ ಬಣ ನಾವೇನು ಕಡಿಮೆ ಇಲ್ಲ ಎನ್ನುವಂತೆ ಕೌಂಟರ್ ಕೊಡುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಇನ್ನೂ ಸಚಿವ ಕೆ.ಎನ್.ರಾಜಣ್ಣ ಅವರೇ ಸ್ವತಃ ಕೆಪಿಸಿಸಿ ಅಧ್ಯಕ್ಷರಿಗೆ ಬಹಿರಂಗ ಸವಾಲು ಹಾಕಿದ್ದು, ಡಿನ್ನರ್ ಮೀಟಿಂಗ್ ಬಗ್ಗೆ ಬೇಜಾರು ಮಾಡಿಕೊಳ್ಳೋಕೆ ನಾವೇನು ಅವರ ಆಸ್ತಿ ಬರೆಸಿಕೊಂಡಿದ್ದೀವಾ?
ಇವರೇನು SC/ST ವಿರೋಧಿಗಳಾ? ಇವೆಲ್ಲಾ ಬಹಳ ದಿವಸ ನಡೆಯಲ್ಲವೆಂಬಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಯಾರ ಜೇಬಿನಲ್ಲಿದೆಯೋ, ಕಾಂಗ್ರೆಸ್ ಹೈಕಮಾಂಡ್ ಜೇಬು ತುಂಬಿಸುತ್ತಿರುವುದು ಯಾರೋ ಗೊತ್ತಿಲ್ಲ. ಆದರೆ ಸೇರಿಗೆ ಸವಾಸೇರು ಎಂದು ಕುರ್ಚಿಗಾಗಿ ನಡೆಸುತ್ತಿರುವ ಈ ಪೈಪೋಟಿ ಮತ್ತು ಆಸಕ್ತಿಯನ್ನು ಕಾಂಗ್ರೆಸ್ ಸಚಿವರು ತಮ್ಮ ಇಲಾಖೆಯ ಕಾರ್ಯ ನಿರ್ವಹಣೆಯಲ್ಲಿ, ರಾಜ್ಯದ ಅಭಿವೃದ್ಧಿಯಲ್ಲಿ ತೋರಿಸಿದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಲೇವಡಿ ಮಾಡಿದ್ದಾರೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…