ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಡಿನ್ನರ್ ಮೀಟಿಂಗ್ ವಿಚಾರ ಕಾವು ಪಡೆದುಕೊಂಡಿದ್ದು, ಸಚಿವ ಕೆ.ಎನ್.ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬಹಿರಂಗ ಸವಾಲು ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,ಅತ್ತ ಕಾಂಗ್ರೆಸ್ ಹೈಕಮಾಂಡ್ ತಮ್ಮ ಜೇಬಿನಲ್ಲಿದೆ ಎನ್ನುವ ರೀತಿ ಗೃಹ ಸಚಿವ ಪರಮೇಶ್ವರ್ ಅವರ ಡಿನ್ನರ್ ಮೀಟಿಂಗ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲೇ ಕೂತು ಕ್ಯಾನ್ಸಲ್ ಮಾಡಿಸಿದ್ದಾರೆ. ಆದರೆ ಇತ್ತ ಸಿಎಂ ಸಿದ್ದರಾಮಯ್ಯ ಬಣ ನಾವೇನು ಕಡಿಮೆ ಇಲ್ಲ ಎನ್ನುವಂತೆ ಕೌಂಟರ್ ಕೊಡುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಇನ್ನೂ ಸಚಿವ ಕೆ.ಎನ್.ರಾಜಣ್ಣ ಅವರೇ ಸ್ವತಃ ಕೆಪಿಸಿಸಿ ಅಧ್ಯಕ್ಷರಿಗೆ ಬಹಿರಂಗ ಸವಾಲು ಹಾಕಿದ್ದು, ಡಿನ್ನರ್ ಮೀಟಿಂಗ್ ಬಗ್ಗೆ ಬೇಜಾರು ಮಾಡಿಕೊಳ್ಳೋಕೆ ನಾವೇನು ಅವರ ಆಸ್ತಿ ಬರೆಸಿಕೊಂಡಿದ್ದೀವಾ?
ಇವರೇನು SC/ST ವಿರೋಧಿಗಳಾ? ಇವೆಲ್ಲಾ ಬಹಳ ದಿವಸ ನಡೆಯಲ್ಲವೆಂಬಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಯಾರ ಜೇಬಿನಲ್ಲಿದೆಯೋ, ಕಾಂಗ್ರೆಸ್ ಹೈಕಮಾಂಡ್ ಜೇಬು ತುಂಬಿಸುತ್ತಿರುವುದು ಯಾರೋ ಗೊತ್ತಿಲ್ಲ. ಆದರೆ ಸೇರಿಗೆ ಸವಾಸೇರು ಎಂದು ಕುರ್ಚಿಗಾಗಿ ನಡೆಸುತ್ತಿರುವ ಈ ಪೈಪೋಟಿ ಮತ್ತು ಆಸಕ್ತಿಯನ್ನು ಕಾಂಗ್ರೆಸ್ ಸಚಿವರು ತಮ್ಮ ಇಲಾಖೆಯ ಕಾರ್ಯ ನಿರ್ವಹಣೆಯಲ್ಲಿ, ರಾಜ್ಯದ ಅಭಿವೃದ್ಧಿಯಲ್ಲಿ ತೋರಿಸಿದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಲೇವಡಿ ಮಾಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…