ರಾಜ್ಯ

ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ನಡೆಸಿದ ಸಮಾವೇಶ, ಅದು ಸರ್ಕಾರಿ ಕಾರ್ಯಕ್ರಮವಲ್ಲ : ಆರ್‌.ಅಶೋಕ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಿಶ್ಲೇಷಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಕಾಂಗ್ರೆಸ್‌ನ ಒಡಕನ್ನು ತೋರಿಸಿದೆ. ಅಲ್ಲಿ ಒಬ್ಬರೂ ಡಿ.ಕೆ.ಶಿವಕುಮಾರ್‌ ಪರ ಮಾತಾಡಲಿಲ್ಲ. ಡಿಕೆಶಿಗೆ ಪಾಠ ಕಲಿಸಲು ಹಾಗೂ ಅಪಮಾನ ಮಾಡಲು ಈ ಸಮಾವೇಶ ನಡೆಸಲಾಗಿದೆ. ಡಿಕೆಶಿ ಈಗ ಎರಡನೇ ದರ್ಜೆಯ ನಾಯಕರಾಗಿಬಿಟ್ಟಿದ್ದಾರೆ. ಅದು ಸರ್ಕಾರಿ ಕಾರ್ಯಕ್ರಮವಲ್ಲ. ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.

ಇದು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯನವರ ಆಂತರಿಕ ಜಗಳ. ಬಿಜೆಪಿಗೆ ಸರ್ಕಾರವನ್ನು ಬೀಳಿಸುವ ಅಗತ್ಯವಿಲ್ಲ. ಈ ಸರ್ಕಾರ ಕಾಂಗ್ರೆಸ್‌ನ ಆಂತರಿಕ ಕಲಹದಿಂದಲೇ ಬಿದ್ದುಹೋಗಲಿದೆ. ಸುರ್ಜೇವಾಲ ರಾಜ್ಯಕ್ಕೆ ಬಂದು ಶಾಸಕರ ಅಹವಾಲುಗಳನ್ನು ಆಲಿಸಿದ್ದಾರೆ. ಇವರ ಜಗಳ ಜನರ ಮುಂದೆ ಬಯಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮೈಸೂರಿನ ಸಮಾವೇಶದಲ್ಲಿ ಕೀಳಾಗಿ ಮಾತಾಡಿದ್ದಾರೆ. ‌‌‌ಪ್ರಧಾನಿ ಬೊಗಳುತ್ತಾರೆಂದು ಹೇಳುವುದು ಕಾಂಗ್ರೆಸ್‌ ನಾಯಕರ ಮನಸ್ಥಿತಿಯನ್ನು ತೋರಿಸುತ್ತದೆ. ಈ ಹಿಂದೆ ಛಲವಾದಿ ನಾರಾಯಣಸ್ವಾಮಿ ಗಾದೆಮಾತು ಹೇಳಿದಾಗ ಸಂಸ್ಕೃತಿ ಬಗ್ಗೆ ಇವರೇ ಮಾತಾಡಿದ್ದರು. ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂಬ ಕಾರಣಕ್ಕೆ ಇವರು ಈ ರೀತಿ ಕೀಳಾಗಿ ಮಾತಾಡುತ್ತಿದ್ದಾರೆ ಎಂದರು.

ಬೆಂಗಳೂರು ಹೋಳು: ಬೆಂಗಳೂರಿನಲ್ಲಿ ಅಭಿವೃದ್ಧಿ ಮಾಡದೆ ಹೋಳು ಮಾಡಲಾಗಿದೆ. ಟ್ರಾಫಿಕ್‌ ಜಾಮ್‌, ಪ್ರವಾಹ, ಕಸದ ಸಮಸ್ಯೆ ಯಾವುದು ಕೂಡ ಈ ಕ್ರಮದಿಂದ ನಿವಾರಣೆಯಾಗುವುದಿಲ್ಲ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಒಡೆದರೆ ಪ್ರಗತಿಯಾಗಲ್ಲ. ಬ್ರ್ಯಾಂಡ್‌ ಎಂಬ ಸ್ಲೋಗನ್‌ನಿಂದ ಮಾತ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ನಗರವನ್ನು ಒಡೆಯುವುದರಿಂದ ಆದಾಯ ಹಂಚಿಕೆಯಲ್ಲಿ ತಾರತಮ್ಯ ಉಂಟಾಗಿ ಇನ್ನಷ್ಟು ಕಲಹ ಉಂಟಾಗಲಿದೆ. ಬೆಂಗಳೂರಿನ ಕೇಂದ್ರದಲ್ಲಿ ಎಲ್ಲೂ ಕಸದ ಘಟಕ ಇಲ್ಲ. ಈ ಕಸವನ್ನು ಹೊರವಲಯಕ್ಕೆ ಸಾಗಿಸಿದರೆ, ಸ್ವೀಕಾರ ಮಾಡುವುದಿಲ್ಲ ಎಂದು ಅಲ್ಲಿನ ಜನರು ಹೇಳಬಹುದು. ಇದರಿಂದ ಇನ್ನಷ್ಟು ಜಗಳವಾಗಲಿದೆ ಎಂದರು.

ಸುರಂಗ ರಸ್ತೆ ಮಾಡಲು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಇಲ್ಲಿ ಗಟ್ಟಿಯಾದ ಬಂಡೆಗಳಿವೆ. ಇಲ್ಲಿ ಸುರಂಗ ಕೊರೆದು ರಸ್ತೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ಸುರಂಗ ರಸ್ತೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಇದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಿದರೆ ಸಾಕಾಗುತ್ತದೆ. ಮೆಟ್ರೊ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿದರೆ, ಟ್ರಾಫಿಕ್‌ ಜಾಮ್‌ ನಿವಾರಣೆಯಾಗುತ್ತದೆ ಎಂದರು.

ಇವರು ಲಾಟರಿ ಸಿಎಂ ಎಂದು ಶಾಸಕರೇ ಹೇಳಿದ್ದಾರೆ. ಇವರು ಜನನಾಯಕರಲ್ಲ, ಚುನಾಯಿತ ಸಿಎಂ ಅಲ್ಲ. ಆದ್ದರಿಂದ ಇನ್ನು ಮುಂದೆ ಸಿದ್ದರಾಮಯ್ಯ ತಾವು ಲಾಟರಿ ಮುಖ್ಯಮಂತ್ರಿ ಎಂದು ಹೇಳಿಕೊಳ್ಳಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago