ರಾಜ್ಯ

ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ನಡೆಸಿದ ಸಮಾವೇಶ, ಅದು ಸರ್ಕಾರಿ ಕಾರ್ಯಕ್ರಮವಲ್ಲ : ಆರ್‌.ಅಶೋಕ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಿಶ್ಲೇಷಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಕಾಂಗ್ರೆಸ್‌ನ ಒಡಕನ್ನು ತೋರಿಸಿದೆ. ಅಲ್ಲಿ ಒಬ್ಬರೂ ಡಿ.ಕೆ.ಶಿವಕುಮಾರ್‌ ಪರ ಮಾತಾಡಲಿಲ್ಲ. ಡಿಕೆಶಿಗೆ ಪಾಠ ಕಲಿಸಲು ಹಾಗೂ ಅಪಮಾನ ಮಾಡಲು ಈ ಸಮಾವೇಶ ನಡೆಸಲಾಗಿದೆ. ಡಿಕೆಶಿ ಈಗ ಎರಡನೇ ದರ್ಜೆಯ ನಾಯಕರಾಗಿಬಿಟ್ಟಿದ್ದಾರೆ. ಅದು ಸರ್ಕಾರಿ ಕಾರ್ಯಕ್ರಮವಲ್ಲ. ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.

ಇದು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯನವರ ಆಂತರಿಕ ಜಗಳ. ಬಿಜೆಪಿಗೆ ಸರ್ಕಾರವನ್ನು ಬೀಳಿಸುವ ಅಗತ್ಯವಿಲ್ಲ. ಈ ಸರ್ಕಾರ ಕಾಂಗ್ರೆಸ್‌ನ ಆಂತರಿಕ ಕಲಹದಿಂದಲೇ ಬಿದ್ದುಹೋಗಲಿದೆ. ಸುರ್ಜೇವಾಲ ರಾಜ್ಯಕ್ಕೆ ಬಂದು ಶಾಸಕರ ಅಹವಾಲುಗಳನ್ನು ಆಲಿಸಿದ್ದಾರೆ. ಇವರ ಜಗಳ ಜನರ ಮುಂದೆ ಬಯಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮೈಸೂರಿನ ಸಮಾವೇಶದಲ್ಲಿ ಕೀಳಾಗಿ ಮಾತಾಡಿದ್ದಾರೆ. ‌‌‌ಪ್ರಧಾನಿ ಬೊಗಳುತ್ತಾರೆಂದು ಹೇಳುವುದು ಕಾಂಗ್ರೆಸ್‌ ನಾಯಕರ ಮನಸ್ಥಿತಿಯನ್ನು ತೋರಿಸುತ್ತದೆ. ಈ ಹಿಂದೆ ಛಲವಾದಿ ನಾರಾಯಣಸ್ವಾಮಿ ಗಾದೆಮಾತು ಹೇಳಿದಾಗ ಸಂಸ್ಕೃತಿ ಬಗ್ಗೆ ಇವರೇ ಮಾತಾಡಿದ್ದರು. ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂಬ ಕಾರಣಕ್ಕೆ ಇವರು ಈ ರೀತಿ ಕೀಳಾಗಿ ಮಾತಾಡುತ್ತಿದ್ದಾರೆ ಎಂದರು.

ಬೆಂಗಳೂರು ಹೋಳು: ಬೆಂಗಳೂರಿನಲ್ಲಿ ಅಭಿವೃದ್ಧಿ ಮಾಡದೆ ಹೋಳು ಮಾಡಲಾಗಿದೆ. ಟ್ರಾಫಿಕ್‌ ಜಾಮ್‌, ಪ್ರವಾಹ, ಕಸದ ಸಮಸ್ಯೆ ಯಾವುದು ಕೂಡ ಈ ಕ್ರಮದಿಂದ ನಿವಾರಣೆಯಾಗುವುದಿಲ್ಲ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಒಡೆದರೆ ಪ್ರಗತಿಯಾಗಲ್ಲ. ಬ್ರ್ಯಾಂಡ್‌ ಎಂಬ ಸ್ಲೋಗನ್‌ನಿಂದ ಮಾತ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ನಗರವನ್ನು ಒಡೆಯುವುದರಿಂದ ಆದಾಯ ಹಂಚಿಕೆಯಲ್ಲಿ ತಾರತಮ್ಯ ಉಂಟಾಗಿ ಇನ್ನಷ್ಟು ಕಲಹ ಉಂಟಾಗಲಿದೆ. ಬೆಂಗಳೂರಿನ ಕೇಂದ್ರದಲ್ಲಿ ಎಲ್ಲೂ ಕಸದ ಘಟಕ ಇಲ್ಲ. ಈ ಕಸವನ್ನು ಹೊರವಲಯಕ್ಕೆ ಸಾಗಿಸಿದರೆ, ಸ್ವೀಕಾರ ಮಾಡುವುದಿಲ್ಲ ಎಂದು ಅಲ್ಲಿನ ಜನರು ಹೇಳಬಹುದು. ಇದರಿಂದ ಇನ್ನಷ್ಟು ಜಗಳವಾಗಲಿದೆ ಎಂದರು.

ಸುರಂಗ ರಸ್ತೆ ಮಾಡಲು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಇಲ್ಲಿ ಗಟ್ಟಿಯಾದ ಬಂಡೆಗಳಿವೆ. ಇಲ್ಲಿ ಸುರಂಗ ಕೊರೆದು ರಸ್ತೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ಸುರಂಗ ರಸ್ತೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಇದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಿದರೆ ಸಾಕಾಗುತ್ತದೆ. ಮೆಟ್ರೊ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿದರೆ, ಟ್ರಾಫಿಕ್‌ ಜಾಮ್‌ ನಿವಾರಣೆಯಾಗುತ್ತದೆ ಎಂದರು.

ಇವರು ಲಾಟರಿ ಸಿಎಂ ಎಂದು ಶಾಸಕರೇ ಹೇಳಿದ್ದಾರೆ. ಇವರು ಜನನಾಯಕರಲ್ಲ, ಚುನಾಯಿತ ಸಿಎಂ ಅಲ್ಲ. ಆದ್ದರಿಂದ ಇನ್ನು ಮುಂದೆ ಸಿದ್ದರಾಮಯ್ಯ ತಾವು ಲಾಟರಿ ಮುಖ್ಯಮಂತ್ರಿ ಎಂದು ಹೇಳಿಕೊಳ್ಳಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago