R AShok
ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಆಡಳಿತಾರೂಢ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೈಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ! ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾ ಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಎಂದು ಮರು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…