R AShok
ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಆಡಳಿತಾರೂಢ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೈಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ! ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾ ಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಎಂದು ಮರು ಪ್ರಶ್ನೆ ಮಾಡಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…