R AShok
ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಆಡಳಿತಾರೂಢ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೈಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ! ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾ ಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಎಂದು ಮರು ಪ್ರಶ್ನೆ ಮಾಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…