r ashok
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ಕನಿಷ್ಟ ಪಕ್ಷ ಸಾರ್ವಜನಿಕ ಜೀವನದಲ್ಲಿ ಗೌರವ ಇಟ್ಟುಕೊಂಡಿದ್ದರೆ, ವಸತಿ ಇಲಾಖೆಯಲ್ಲಿ ನಡೆದಿರುವ ಆಕ್ರಮದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ಫಲಾನುಭವಿಗಳು ಹಣ ನೀಡಬೇಕು ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ಅವರೇ ಬಹಿರಂಗಪಡಿಸಿದ್ದಾರೆ. ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ಪ್ರಶ್ನೆ ಮಾಡಿದರು.
ವಸತಿ ಇಲಾಖೆಯಲ್ಲಿ ಲಂಚ ಕೊಡದೇ ಮನೆ ಸಿಗುವುದಿಲ್ಲ. ಶಾಸಕರೇ ಇದರ ಬಗ್ಗೆ ಮಾತಾಡಿದ್ದಾರೆ, ಆಡಿಯೋ ಇದೆ. ಇದು ಸ್ಯಾಂಪಲ್ ಮಾತ್ರ, ಮನೆ ಬೇಕಾ ಲಂಚ ಕೊಡಿ.
ಸಿಎಂಗೆ ಗೌರವ ಇದ್ದರೆ, ಮಾನಮರ್ಯಾದೆ ಇದ್ದರೆ, ಕೂಡಲೇ ಇದನ್ನು ತನಿಖೆಗೆ ಕೊಡಲಿ. ಇಲ್ಲದ ಸಬೂಬು ಹೇಳುವುದು ಬೇಡ ಎಂದು ವಾಗ್ದಾಳಿ ನಡೆಸಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…