ರಾಜ್ಯ

ಟಾಸ್ಕ್‌ ಫೋರ್ಸ್‌ ರಚನೆ : ಹಿಂದೂಗಳೇ ಗುರಿ : ಆರ್.ಅಶೋಕ್‌ ಆರೋಪ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಅಪಾದನೆ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕಾಂಗ್ರೆಸ್‌ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್‌ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್‌ ನಾಯಕರು ಬದುಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಕರಾವಳಿ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ಗ್ರೇಟರ್‌ ಬೆಂಗಳೂರು ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ. ಕಸ ವಿಲೇವಾರಿ ಮಾಡಲು ಗುತ್ತಿಗೆದಾರರಿಗೆ ಜನವರಿಯಿಂದಲೇ ಬಿಲ್‌ ಪಾವತಿ ಮಾಡಿಲ್ಲ. ಹೊರರಾಜ್ಯದವರಿಗೆ ಗುತ್ತಿಗೆ ನೀಡಿ ಕಸದ ಲಾಬಿ ಸೃಷ್ಟಿ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ಚುನಾವಣೆ ಮಾಡಿದರೆ ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗುತ್ತಾರೆ? ಎಂದು ಪ್ರಶ್ನಿಸಿದರು.

ಮೇಕೆದಾಟು ಯೋಜನೆಗೆ ಆಗ್ರಹಿಸಿ ತಮಿಳುನಾಡು ಸರ್ಕಾರದ ಮುಂದೆ ಪ್ರತಿಭಟಿಸಲು, ಕಲ್ಲು ಹೊಡೆಯಲು ನಾವು ಸಿದ್ಧರಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಇದಕ್ಕೆ ಸಿದ್ಧರಿದ್ದಾರೆಯೇ? ಇಲಾಖೆಗಳಿಗೆ ಅನುದಾನ ನೀಡದೆಯೇ ಸಚಿವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಕೆಎಸ್‌ಆರ್‌ಟಿಸಿಗೆ ಹಣ ನೀಡಿಲ್ಲ. ಜೋಳ ಖರೀದಿ ಕೇಂದ್ರಗಳಿಗೆ ಹಣ ನೀಡಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಸಂಬಳಕ್ಕೆ ಹಣ ಕೊಟ್ಟಿಲ್ಲ ಎಂದು ದೂರಿದರು.

ನಟ ಕಮಲ್‌ ಹಾಸನ್‌ ಅವರ ಯಾವುದೇ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತಾಡಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

1 hour ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

1 hour ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

1 hour ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

1 hour ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

2 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

2 hours ago