r ashok
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಅಪಾದನೆ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್ ನಾಯಕರು ಬದುಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಕರಾವಳಿ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.
ಗ್ರೇಟರ್ ಬೆಂಗಳೂರು ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ. ಕಸ ವಿಲೇವಾರಿ ಮಾಡಲು ಗುತ್ತಿಗೆದಾರರಿಗೆ ಜನವರಿಯಿಂದಲೇ ಬಿಲ್ ಪಾವತಿ ಮಾಡಿಲ್ಲ. ಹೊರರಾಜ್ಯದವರಿಗೆ ಗುತ್ತಿಗೆ ನೀಡಿ ಕಸದ ಲಾಬಿ ಸೃಷ್ಟಿ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ಚುನಾವಣೆ ಮಾಡಿದರೆ ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗುತ್ತಾರೆ? ಎಂದು ಪ್ರಶ್ನಿಸಿದರು.
ಮೇಕೆದಾಟು ಯೋಜನೆಗೆ ಆಗ್ರಹಿಸಿ ತಮಿಳುನಾಡು ಸರ್ಕಾರದ ಮುಂದೆ ಪ್ರತಿಭಟಿಸಲು, ಕಲ್ಲು ಹೊಡೆಯಲು ನಾವು ಸಿದ್ಧರಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್ ಇದಕ್ಕೆ ಸಿದ್ಧರಿದ್ದಾರೆಯೇ? ಇಲಾಖೆಗಳಿಗೆ ಅನುದಾನ ನೀಡದೆಯೇ ಸಚಿವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಕೆಎಸ್ಆರ್ಟಿಸಿಗೆ ಹಣ ನೀಡಿಲ್ಲ. ಜೋಳ ಖರೀದಿ ಕೇಂದ್ರಗಳಿಗೆ ಹಣ ನೀಡಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಸಂಬಳಕ್ಕೆ ಹಣ ಕೊಟ್ಟಿಲ್ಲ ಎಂದು ದೂರಿದರು.
ನಟ ಕಮಲ್ ಹಾಸನ್ ಅವರ ಯಾವುದೇ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತಾಡಬೇಕು ಎಂದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…