ರಾಜ್ಯ

ಟಾಸ್ಕ್‌ ಫೋರ್ಸ್‌ ರಚನೆ : ಹಿಂದೂಗಳೇ ಗುರಿ : ಆರ್.ಅಶೋಕ್‌ ಆರೋಪ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಅಪಾದನೆ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕಾಂಗ್ರೆಸ್‌ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್‌ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್‌ ನಾಯಕರು ಬದುಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಕರಾವಳಿ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ಗ್ರೇಟರ್‌ ಬೆಂಗಳೂರು ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ. ಕಸ ವಿಲೇವಾರಿ ಮಾಡಲು ಗುತ್ತಿಗೆದಾರರಿಗೆ ಜನವರಿಯಿಂದಲೇ ಬಿಲ್‌ ಪಾವತಿ ಮಾಡಿಲ್ಲ. ಹೊರರಾಜ್ಯದವರಿಗೆ ಗುತ್ತಿಗೆ ನೀಡಿ ಕಸದ ಲಾಬಿ ಸೃಷ್ಟಿ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ಚುನಾವಣೆ ಮಾಡಿದರೆ ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗುತ್ತಾರೆ? ಎಂದು ಪ್ರಶ್ನಿಸಿದರು.

ಮೇಕೆದಾಟು ಯೋಜನೆಗೆ ಆಗ್ರಹಿಸಿ ತಮಿಳುನಾಡು ಸರ್ಕಾರದ ಮುಂದೆ ಪ್ರತಿಭಟಿಸಲು, ಕಲ್ಲು ಹೊಡೆಯಲು ನಾವು ಸಿದ್ಧರಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಇದಕ್ಕೆ ಸಿದ್ಧರಿದ್ದಾರೆಯೇ? ಇಲಾಖೆಗಳಿಗೆ ಅನುದಾನ ನೀಡದೆಯೇ ಸಚಿವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಕೆಎಸ್‌ಆರ್‌ಟಿಸಿಗೆ ಹಣ ನೀಡಿಲ್ಲ. ಜೋಳ ಖರೀದಿ ಕೇಂದ್ರಗಳಿಗೆ ಹಣ ನೀಡಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಸಂಬಳಕ್ಕೆ ಹಣ ಕೊಟ್ಟಿಲ್ಲ ಎಂದು ದೂರಿದರು.

ನಟ ಕಮಲ್‌ ಹಾಸನ್‌ ಅವರ ಯಾವುದೇ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತಾಡಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

21 mins ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

6 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

6 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

7 hours ago