ಬೆಂಗಳೂರು: ವಿಧಾನಸಭೆಯ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದು ಮನವಿ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನದ ವೇಳೆ ಗಲಾಟೆ ಮಾಡಿ ಸ್ಪೀಕರ್ ಪೀಠಕ್ಕೆ ಆಗೌರವ ತೋರಿದ್ದಾರೆಂದು ಸ್ಪೀಕರ್ ಯುಟಿ ಖಾದರ್ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಈ ಸಂಬಂಧ ಸ್ಪೀಕರ್ಗೆ ಪತ್ರ ಬರೆದಿರುವ ಆರ್. ಅಶೋಕ್ ಅವರು, ರಾಜ್ಯದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳಾಗಿವೆ. ಈ ಸ್ಥಳದಲ್ಲಿ ಸ್ಪೀಕರ್ ಸ್ಥಾನವೂ ಅಷ್ಟೇ ಪ್ರಮುಖವಾಗಿದೆ. ಅಂದು ಮಾರ್ಚ್ 21 ರಂದು ನಡೆದಿರುವ ಘಟನೆ ಉದ್ದೇಶ ಪೂರ್ವಕವಾಗಿ ಆಗಿರುವುದಲ್ಲ. ನಿಮ್ಮ ಬಗ್ಗೆ ಅಪಾರ ಗೌರವವಿದೆ. ಜನ ಸಾಮಾನ್ಯರ ಹಿತದೃಷ್ಠಿಯಿಂದ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…