ರಾಜ್ಯ

ಉದಯಗಿರಿ ಪೊಲೀಸ್‌ ಠಾಣೆ ಕಲ್ಲು ತೂರಾಟ ಪ್ರಕರಣ:ಆರ್‌.ಅಶೋಕ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಕಲ್ಲು ತೂರಾಟ ಪ್ರಕರಣವನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ನಗರದ ಉದಯಗಿರಿ ಪೊಲೀಸ್‌ ಠಾಣೆಗೆ ಇಂದು(ಫೆಬ್ರವರಿ.11) ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಅಧಿಕಾರಿಗಳ ಬಗ್ಗೆ ಬಹಳ ಕೆಟ್ಟದಾಗಿ ಸಚಿವ ಕೆ.ಎನ್‌.ರಾಜಣ್ಣ ಅವರು ಮಾತನಾಡಿದ್ದಾರೆ.  ರಾಜ್ಯದಲ್ಲಿ  ಪೊಲೀಸ್ ಇಲಾಖೆಯೇ ಸರಿ ಇಲ್ಲ ಎನ್ನುವುದಾದರೆ ಪೊಲೀಸ್‌ ಠಾಣೆ ಮುಚ್ಚಿ ಬಿಡಿ. ಇಂತಹ ಘಟನೆಯೇ ಹುಬ್ಬಳ್ಳಿಯಲ್ಲಿಯೂ ನಡೆದಾಗ ಸಿಎಂ ಸಿದ್ದರಾಮಯ್ಯ ಅವರೇ ಆರೋಪಿಗಳಿಗೆ ಖುಲಾಸೆ ಮಾಡಿ ಎಂದು ಧೈರ್ಯ ತುಂಬಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೇ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರು, ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರದೆ ಕಾಂಗ್ರೆಸ್ ಅವರ ಅಪ್ಪನ ಮನೆಗಳಿಗೆ ಕರೆದುಕೊಂಡು ಹೋಗಬೇಕಿತ್ತಾ? ಉದಯಗಿರಿ ಏನೂ ಪಾಕಿಸ್ತಾನದಲ್ಲಿ ಇದೆಯಾ? ಅಥವಾ ಉದಯಗಿರಿಗೇ ಬೇರೆ ಕಾನೂನು ಇದೆಯಾ? ಆ ಮಂತ್ರಿಗೇನು ಕಾಮನ್ ಸೆನ್ಸ್ ಇಲ್ವಾ? ಈ ಪ್ರಕರಣದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಕಾನೂನು ಉದಯಗಿರಿಗೆ ಅನ್ವಯ ಆಗಲ್ವಾ? ಸ್ವಲ್ಪ ಯಾಮಾರಿದ್ದರೆ ಪೊಲೀಸ್ ಠಾಣೆಯನ್ನೇ ಉಡೀಸ್ ಮಾಡಿ ಬಿಡುತ್ತಿದ್ದರು. ಈ ದೇಶದಲ್ಲಿ ಏನೇ ನಡೆದರು ಆರ್‌ಎಸ್‌ಎಸ್‌ ಕಾರಣನಾ? ಈ ಸರ್ಕಾರ ಬದುಕಿದೆಯಾ ಅಥವಾ ಸತ್ತು ಹೋಗಿದೆಯಾ ಗೊತ್ತಿಲ್ಲ ಎಂದು ಪ್ರಶ್ನಿಸಿದರು.

ಇನ್ನು ಗೃಹ ಸಚಿವರಿಗೆ ತಮ್ಮ ಇಲಾಖೆಯ ಬಗ್ಗೆಯೇ ಇಷ್ಟವಿಲ್ಲ. ಗೃಹ ಸಚಿವರಿಗೆ ಅವರದೇ ಇಲಾಖೆಯ ಮೇಲೆ ಆಸಕ್ತಿ ಇಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ ಸಂಪೂರ್ಣ ಕಾನೂನು ವ್ಯವಸ್ಥೆ ಹಾಳಾಗುರುವುದರಿಂದ ಈ ರಾಜ್ಯವನ್ನು ಆ ದೇವರೇ ಕಾಪಾಡಬೇಕು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಉದಯಗಿರಿ ಪೊಲೀಸ್‌ ಠಾಣೆಯನ್ನು ಉಳಿಸುವ ಕೆಲಸ ಮಾಡಬೇಕು

ಸಿಎಂ ಸಿದ್ದರಾಮಯ್ಯ ಅವರು ಕೇವಲ ಆರು ತಿಂಗಳು ಮಾತ್ರ ಅಧಿಕಾರಲ್ಲಿರುತ್ತಾರೆ. ಆದರೆ ನಾನು ಈಗಾಗಲೇ ನವೆಂಬರ್‌ 15 ರವರೆಗೂ ಮಾತ್ರ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಹೇಳಿದ್ದೀನಿ. ಇನ್ನು ಸಿಎಂ ಸಿದ್ದರಾಮಯ್ಯ ನಿದ್ದೆರಾಮಯ್ಯ ಆಗುವುದನ್ನು ಬಿಟ್ಟು ಈಗಲಾದರೂ ಆಡಳಿತದತ್ತ ಗಮನಹರಿಸಬೇಕು. ನಿಮಗಿರುವ ನವೆಂಬರ್‌ವರೆಗಿನ ಅವಧಿಯಲ್ಲಾದರೂ‌ ಒಳ್ಳೆಯ ಕೆಲಸ ಮಾಡಬೇಕು. ಒಳಿತು ಮಾಡು ಮನುಷ್ಯ ನೀ ಇರೋದು ಮೂರೇ ದಿವಸ ಎನ್ನುವ ಹಾಗೇ ಉದಯಗಿರಿ ಪೊಲೀಸ್‌ ಠಾಣೆಯನ್ನು ಉಳಿಸುವ ಕೆಲಸ ಮಾಡಿ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago